This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಮೊಟ್ಟೆ ವಿತರಣೆಗೆ ವಿರೋಧ ಪ್ರತಿಭಟನೆ – ವಿತರಣೆ ಮಾಡುವ ಮುನ್ನವೇ ಕೂಡಲೇ ಈ ಒಂದು ಆದೇಶ ಹಿಂದೆ ಪಡೆಯಲು ಒತ್ತಾಯ…..

WhatsApp Group Join Now
Telegram Group Join Now

ಬೀದರ್‌ –

ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಅನುದಾನಿತ,ಸರ್ಕಾರಿ ಶಾಲೆಗಳ 1 ರಿಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಯೂಟದ ಜೊತೆಗೆ ಮೊಟ್ಟೆ ಕೊಡುವ ಸರ್ಕಾರದ ಆದೇಶಕ್ಕೆ ಬೀದರ್ ಜಿಲ್ಲೆಯಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾ ಗಿದೆ.ಸರ್ಕಾರವು ಈ ಒಂದು ಆದೇಶವನ್ನು ಹಿಂಪಡೆಯ ಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಮತ್ತು ಅಕ್ಕನಾಗ ಲಾಂಬಿಕಾ ಮಹಿಳಾ ಗಣ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇನ್ನೂ ಇತ್ತ ಮೊಟ್ಟೆ ಇದೊಂದು ಸಸ್ಯಾಹಾರ,ಮಾಂಸಾ ಹಾರ ಅಲ್ಲ.ಅದು ಪೌಷ್ಟಿಕಾಂಶಗಳಿಂದ ತುಂಬಿದ ದ್ರವ. ಮೊಟ್ಟೆಗೆ ಧರ್ಮ, ಜಾತಿ ಲೇಪನ ಮಾಡಬಾರದು ಆರ್‌ಪಿಐ ಭಾರತೀಯ ವಿದ್ಯಾರ್ಥಿ ಸಂಘ ಸೇರಿ ವಿವಿಧ ಸಂಘಟನೆ ಗಳು ಕೋರಿವೆ.ಇನ್ನೂ ಕೋಳಿಮೊಟ್ಟೆಯಿಂದ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ.ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಕಳಕಳಿ ಇದ್ದರೆ ಹಣ್ಣು, ದ್ವಿದಳ ಧಾನ್ಯಗಳು, ಮೊಳಕೆ ಕಾಳು ಮುಂತಾದವನ್ನು ನೀಡುವ ವ್ಯವಸ್ಥೆ ಮಾಡಬೇಕು ಎಂದು ಬಸವ ಮಂಟಪದ ಪ್ರಧಾನ ಸಂಚಾಲಕಿ ಮಾತೆ ಸತ್ಯಾದೇವಿ ಒತ್ತಾಯಿಸಿದರು

ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಬಸವರಾಜ ಧನ್ನೂರ ಅವರು, 2007ರಲ್ಲಿ ಸರ್ಕಾರ ಹೋರಾಟಕ್ಕೆ ಮಣಿದು ನಿರ್ಧಾರ ಕೈಬಿಟ್ಟಿತ್ತು.ಈಗ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ ಎಂದರು ಇನ್ನೂ ಇದೊಂದು ಸೂಕ್ತ ನಿರ್ಧಾರವಾಗಿದೆ ಎಂದು ಆರ್‌ಪಿಐ (ಅಂಬೇಡ್ಕರ್) ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ್ ಅವರು ಹೇಳಿದರು. ಅಂಗನ ವಾಡಿ ಕೇಂದ್ರಗಳಲ್ಲಿ ಈಗಲೂ ಮೊಟ್ಟೆ ವಿತರಿಸಲಾಗುತ್ತಿದೆ. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರಿಗೆ ಮೊಟ್ಟೆ ವಿತರಿಸಲಾಗುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಸೂಕ್ತ ನಿರ್ಣಯ ಕೈಗೊಂಡಿದೆ ಎಂದಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk