This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

ಗದಗ

ಸರ್ಕಾರಿ ನೌಕರರ ಪ್ರತಿಭಟನೆ – ರವಿ ಗುಂಜೀಕರ ನೇತೃತ್ವದಲ್ಲಿ ನೌಕರರ ಪ್ರತಿಭಟನೆ ಜಿಲ್ಲಾಧಿಕಾರಿಗೆ ಮನವಿ…..

ಸರ್ಕಾರಿ ನೌಕರರ ಪ್ರತಿಭಟನೆ – ರವಿ ಗುಂಜೀಕರ ನೇತೃತ್ವದಲ್ಲಿ ನೌಕರರ ಪ್ರತಿಭಟನೆ ಜಿಲ್ಲಾಧಿಕಾರಿಗೆ ಮನವಿ…..
WhatsApp Group Join Now
Telegram Group Join Now

ಗದಗ

ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜೀಕರ ನೇತೃತ್ವದಲ್ಲಿ ಗದಗ ನಲ್ಲಿ ನೌಕರರು ಪ್ರತಿಭಟನೆ ಮಾಡಿದರು

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.’ನ. 4ರಂದು ಗಜೇಂದ್ರಗಡ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ಸಂದರ್ಭದಲ್ಲಿ ತಹಶೀಲ್ದಾರ್‌ ಮನವಿ ಸ್ವೀಕರಿಸಲು ತಡವಾಗಿ ಬಂದರು ಎಂದು ಆರೋಪಿಸಿ ಮಾಜಿ ಸಚಿವ ಕಳಕಪ್ಪ ಬಂಡಿ, ಕರ್ತವ್ಯನಿರತ ತಹಶೀಲ್ದಾರ್‌ ಕಿರಣಕುಮಾರ ಕುಲಕರ್ಣಿ ಅವರನ್ನು ಸಾರ್ವಜನಿಕರ ಎದುರಿಗೆ ಏಕವಚನದಿಂದ ನಿಂದಿಸಿದ್ದಾರೆ.

ಈ ಮೂಲಕ ಕಂದಾಯ ಇಲಾಖೆ ಅಧಿಕಾರಿಗಳಿಗೆ, ನೌಕರರಿಗೆ ಕರ್ತವ್ಯ ನಿರ್ವಹಿಸಲು ತೊಂದರೆಯುಂಟು ಮಾಡಿದ್ದಾರೆ’ ಎಂದು ದೂರಿದರು.’ಸರ್ಕಾರದ ನಿಯಮ ಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಂದಾಯ ಇಲಾಖೆ ಅಧಿಕಾರಿಗಳಿಗೆ, ನೌಕರರಿಗೆ ತೊಂದರೆ ನೀಡಿ, ಮಾನಸಿಕವಾಗಿ ಮತ್ತು ನೈತಿಕವಾಗಿ ಕುಗ್ಗಿಸುವ ರೀತಿಯಲ್ಲಿ ನಡೆದುಕೊಂಡಿದ್ದು ವಿಷಾದ ನೀಯ ಸಂಗತಿ.

ಪ್ರತಿದಿನ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸ ಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಬಳ್ಳಾರಿ, ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ವಿ.ಎಂ. ಹಿರೇಮಠ, ಎಸ್.ಆರ್. ಬಂಡಿ, ಡಿ.ಟಿ. ವಾಲ್ಮೀಕಿ, ಅರುಣ ಮಂಟೂರ, ಕೆ.ಬಿ. ಕೊಣ್ಣೂರ, ಎಸ್.ಎಂ. ಹಿರೇಮಠ, ಎಂ.ಎ. ನದಾಫ್, ಎನ್.ಬಿ. ದೊಡ್ಡಮನಿ, ಸಿ.ಎಸ್. ಮಠದ, ಪಿ.ಬಿ. ಮುಧೋಳಮಠ, ಪಿ.ಎಫ್. ಅಗಸಿಮನಿ ಸೇರಿದಂತೆ ಹಲವು ನೌಕರರು ಉಪಸ್ಥಿತರಿ ದ್ದರು.

ಸುದ್ದಿ ಸಂತೆ ನ್ಯೂಸ್ ಗದಗ…..


Google News

 

 

WhatsApp Group Join Now
Telegram Group Join Now
Suddi Sante Desk