ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್ – ಕಂಠೀರವ ಸ್ಟುಡಿಯೋದಲ್ಲಿ ತಂದೆ ತಾಯಿ ಸಮಾಧಿಯ ಪಕ್ಕದಲ್ಲೇ ಅಂತ್ಯಕ್ರಿಯೆ…..

Suddi Sante Desk

ಬೆಂಗಳೂರು –

ಕನ್ನಡ ಹೆಸರಾಂತ ಯುವ ನಾಯಕ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನಡೆಯಿತು.ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಈ ಒಂದು ಅಂತ್ಯಕ್ರಿಯೆ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ದಲ್ಲಿ ತಂದೆ ತಾಯಿ ಸಮಾಧಿಯ ಪಕ್ಕದಲ್ಲಿ ಯೇ ಮಾಡಲಾಯಿತು.

ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾ ಯಿತು.ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ನಟ ಶಿವಣ್ಣ ಸೇರಿದಂತೆ ಕುಟುಂಬಸ್ಥರು ಕನ್ನಡ ಚಿತ್ರರಂ ಗದ ಗಣ್ಯರು ಆಪ್ತರು ಮುಖ್ಮಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಗಣ್ಯರು ಪಾಲ್ಗೊಂಡು ಅಂತ್ಯಕ್ರಿಯೆಯಲ್ಲಿ ತೊಡಗಿ ಕಣ್ಣೀರಿನ ಮೂಲ ವಿಧಾನ ಹೇಳಿದರು.ತಾಯಿಯನ್ನು ತಬ್ಬಿಕೊಂಡು ಪುತ್ರಿಯರು ಅಳುತ್ತಿರುವ ದೃಶ್ಯ ಮನಕಲಕುವಂತೆ ಕಂಡು ಬಂದಿತು.

ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆ ನುಡಿಸುವುದರೊಂದಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ರಾಜಕು ಮಾರ್ ಅಂತ್ಯಕ್ರಿಯೆ ನೆರವೇರಿಸಲಾಯಿತು.ಪುನೀತ್ ಪಾರ್ಥಿವ ಶರೀರಕ್ಕೆ ಪೊಲೀಸರಿಂದ ಗೌರವವಂದನೆ ಸಲ್ಲಿಸಲಾಗಿದೆ. ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಲಾಗಿದೆ.ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿ ಯಾಗಿದ್ದರು.ರಾಘವೇಂದ್ರ ರಾಜಕುಮಾರ್ ಪುತ್ರ ವಿನಯಕುಮಾರ್ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನ ನೇರವೆರಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.