ಲೋಕಾಯುಕ್ತ ಬಲೆಗೆ ಬಿದ್ದ ಜಂಟಿ ನಿರ್ದೇಶಕ 50 ಸಾವಿರ ತಗೆದುಕೊಳ್ಳುವಾಗ ರೇಡ್ ಹ್ಯಾಂಡ್ ಟ್ರ್ಯಾಪ್

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ಜಂಟಿ ನಿರ್ದೇಶಕ 50 ಸಾವಿರ ತಗೆದುಕೊಳ್ಳುವಾಗ ರೇಡ್ ಹ್ಯಾಂಡ್ ಟ್ರ್ಯಾಪ್

ಬೆಳಗಾವಿ

ಸಬ್ಸಿಡಿ ಹಣ ಬಿಡುಗಡೆಗೆ 50,000 ರೂ ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರನ್ನು  ಬೆಳಗಾವಿಯಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ನಗರದ ಗಿರೀಶ ಕುಲಕರ್ಣಿ ಅವರಿಗೆ ಉದ್ಯಮ ಸ್ಥಾಪನೆಗಾಗಿ ಸರ್ಕಾರದ ಸಹಾಯಧನ ಯೋಜನೆ ಅಡಿಯಲ್ಲಿ ಸಬ್ಸಿಡಿ ಹಣ ಬಿಡುಗಡೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ಕೊಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲವೆಂದು ಹೇಳಿದ್ದರು.ಈ ಕುರಿತು ಗಿರೀಶ ಕುಲಕರ್ಣಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು 50,000 ರೂ. ಲಂಚ ಪಡೆ ಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಮತ್ತು ಸಹಾಯಕ ಜಂಟಿ ನಿರ್ದೇಶಕ ಪದ್ಮಾಕಾಂತ ಅವರನ್ನು ಬಂಧಿಸಿ ದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.