ಹುಬ್ಬಳ್ಳಿ –
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಹುಬ್ಬಳ್ಳಿಯ ರಜತ್ ಉಳ್ಳಾಗಡ್ಡಿಮಠ ಜಾಗೃತಿ ಮೂಡಿಸುತ್ತಿದ್ದಾರೆ ನಗರದ ಹಲವೆಡೆ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಾ ಮಾಹಿತಿಯನ್ನು ಒದಗಿಸುತ್ತಿದ್ದಾರೆ ಇನ್ನೂ ಯುವ ಕರ್ನಾಟಕದತ್ತ ಮಹತ್ವದ ಹೆಜ್ಜೆಯನ್ನು ಇಟ್ಟಿರುವ ಮುಖ್ಯಮಂತ್ರಿ ಡಿಕೆಶಿ ಯವರ ಕಾರ್ಯಕ್ಕೆ ಸಾಥ್ ನೀಡಿದ್ದಾರೆ
ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾ ಕಾಂಕ್ಷಿ ಯೋಜನೆಯಾದ ‘ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್’ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ಸ್ಥಳೀಯ ಕನಕದಾಸ, ಕಾಡಸಿದ್ದೇಶ್ವರ, ಪಿಸಿ ಜಾಬಿನ್ ಕಾಲೇಜಿಗಳಲ್ಲಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಜತ್ ಉಳ್ಳಾಗಡ್ಡಿಮಠ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಶಿಕ್ಷಣ ಮತ್ತು ಯುವ ಸಬಲೀಕರಣಕ್ಕೆ ನೀಡುತ್ತಿರುವ ಆದ್ಯತೆಯನ್ನು ವಿವರಿ ಸಿದರು.ಈ ಐತಿಹಾಸಿಕ ನಿರ್ಧಾರವು ರಾಜ್ಯದ ಕೋಟಿಯಾoತರ ವಿದ್ಯಾರ್ಥಿಗಳ ಆರ್ಥಿಕ ಹೊರೆ ತಗ್ಗಿಸಲಿದೆ. ಇದು ಕೇವಲ ಒಂದು ಯೋಜನೆಯಲ್ಲ, ಬದಲಾಗಿ ಯುವ ಕರ್ನಾಟಕ ನಿರ್ಮಾಣದ ಕಡೆಗೆ ಇಟ್ಟಿರುವ ಬಲವಾದ ಹೆಜ್ಜೆ,” ಎಂದರು.
ಶಾಲಾ ಮಟ್ಟದಿಂದ ಸ್ನಾತಕೋತ್ತರ ಪದವಿಯವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಈ ಉಚಿತ ಬಸ್ ಪಾಸ್ ಸೌಲಭ್ಯ ಲಭ್ಯವಿರು ತ್ತದೆ. ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಿಗದಿತ ಪ್ರಕ್ರಿಯೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಶುಲ್ಕ ಪಾವತಿಸಿ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಹಣ ಮರುಪಾವತಿ ಮಾಡಲಾಗು ವುದು.ವಿದ್ಯಾರ್ಥಿಗಳು ಸರ್ಕಾರದ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ರಾಜ್ಯದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ವೀರೇಶ್ ಕಡಕೋಳಮಠ, ಸಂಗಮೇಶ್ ಗೌರಕ್ಕನವರ, ಸಾದಿಕ್ ಯಕ್ಕುಂಡಿ, ಷರೀಫ್ ಗರ್ಗದ ಬಾಳಮ್ಮ ಜಂಗನವರ್, ಸಂತೋಷ್ ನಾಯಕ್, ಸೈಫ್ ಯರ್ಗಟ್ಟಿ, ಉಮೇಶ್ ಕೊಟ್ಟರೆಣ್ಣವರ್, ಕಲಾವತಿ ದತ್ತವಾಡ, ಮದಾರ್ ಮಕಂದಾರ ಕಾಲೇಜಿನ ಪ್ರಾಂಶುಪಾಲರು, ಬೋಧಕ ವರ್ಗದವರು ಮತ್ತು ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..



