ಲೋಕಾಯುಕ್ತ ಬಲೆಗೆ ಬಿದ್ದ BEO ಊಟ ತಿಂಡಿ ಯ ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಮಕೃಷ್ಣಯ್ಯ ಟ್ರ್ಯಾಪ್

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ BEO ಊಟ ತಿಂಡಿ ಯ ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಮಕೃಷ್ಣಯ್ಯ ಟ್ರ್ಯಾಪ್

ತುಮಕೂರು

ಊಟ-ತಿಂಡಿಯ ಕುರಿತಂತೆ ಹೋಟೆಲ್ ಬಿಲ್ ಪಾಸ್ ಮಾಡಲಿಕ್ಕೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ  ಶಿಕ್ಷಣ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಿಐಇಟಿ) ಪ್ರಾಂಶುಪಾಲ ರಾಮಕೃಷ್ಣಯ್ಯ  ಬಲೆಗೆ ಬಿದ್ದ ಆರೋಪಿಯಾಗಿದ್ದಾರೆ

 

ತುಮಕೂರು ಲೋಕಾಯುಕ್ತ ಡಿವೈಎಸ್​​ಪಿ ರವೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಡಿಐಇಟಿ) ಪ್ರಾಂಶುಪಾಲ ರಾಮಕೃಷ್ಣಯ್ಯ ಅವರನ್ನು ಲಂಚ ಪಡೆಯುವಾಗಲೇ ಬಲೆಗೆ ಕೆಡವಿಕೊಂಡಿದ್ದಾರೆ

 

ಊಟ-ತಿಂಡಿಯ ಬಾಬ್ತು ಹೋಟೆಲ್ ಬಿಲ್ ಪಾಸ್ ಮಾಡಲು ರಾಮಕೃಷ್ಣಯ್ಯ 17 ಸಾವಿರ ರೂ. ಲಂಚ ಕೇಳುತ್ತಿದ್ದಾರೆಂದು ಹನುಮಂತ ರಾಜು ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಈ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ರಾಮಕೃಷ್ಣಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ತನಿಖೆ ಮುಂದುವರಿದಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.