This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ರಾಜ್ಯದ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ – ಎರಡು ಹಂತದಲ್ಲಿ ನಡೆಯಲಿದೆ ರಾಜ್ಯದ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆ

ರಾಜ್ಯದ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ – ಎರಡು ಹಂತದಲ್ಲಿ ನಡೆಯಲಿದೆ ರಾಜ್ಯದ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆ
WhatsApp Group Join Now
Telegram Group Join Now

ಬೆಂಗಳೂರು

ಹೌದು ರಾಜ್ಯದ ಸರ್ಕಾರಿ ಪ್ರಾಥಮಿಕ,ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ರಾಷ್ಟ್ರೀಯ ಅವಿಷ್ಕಾರ್ ಅಭಿಯಾನದಡಿ ಈ ಒಂದು ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ಇಲಾಖೆಯ ನಿರ್ದೇಶಕರು ಸೂಚನೆಯನ್ನು ನೀಡಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಅವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಸಪ್ರಶ್ನೆ ಆಯೋಜಿಸಿ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸೂಚನೆ ನೀಡಿದ್ದಾರೆ.ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಯನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಗಣಿತ,ವಿಜ್ಞಾನ,ತಂತ್ರಜ್ಞಾನ,ಸಾಮಾನ್ಯ ಜ್ಞಾನ, ಭಾಷೆ,ದೇಶದ ಪರಂಪರೆ ಮತ್ತು ವಿವಿಧ ವಿಷಯ ಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಕಲಿಕೆ ಯಲ್ಲಿ ಆಸಕ್ತಿ ಮೂಡಿಸಲು ಕಾರ್ಯಕ್ರಮವು ಪೂರಕವಾಗಿದೆ ಎಂದಿದ್ದಾರೆ.

ಜನವರಿ 10 ರಿಂದ ಫೆಬ್ರವರಿ 24 ರವರೆಗೆ ಸ್ಪರ್ಧೆ ಗಳನ್ನು ವಿವಿಧ ಹಂತಗಳಲ್ಲಿ ನಡೆಸಿ. ತಾಲೂಕು, ವಿಭಾಗ ಮತ್ತು ರಾಜ್ಯ ಮಟ್ಟದಲ್ಲಿ ಸ್ಪರ್ಧೆಯನ್ನು 5 ರಿಂದ 7 (ಜೂನಿಯರ್ ವಿಭಾಗ) 8ರಿಂದ 10 ನೇ ತರಗತಿ (ಸೀನಿಯರ್ ವಿಭಾಗ) ಮಕ್ಕಳಿಗೆ 2 ಹಂತ ದಲ್ಲಿ ಆಯೋಜಿಸುವಂತೆ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು….


Google News

 

 

WhatsApp Group Join Now
Telegram Group Join Now
Suddi Sante Desk