ಸರ್ಕಾರಿ ನೌಕರರಿಗೆ ಬೆದರಿಕೆ ಹಾಕಿ ಬ್ಲಾಕ್ಮೇಲ್ ಮಾಡಿ ಕಿರುಕುಳ ನೀಡಿದರೆ ಸಹಿಸೊದಿಲ್ಲ ಎಂದ ರಾಜ್ಯಾಧ್ಯಕ್ಷರ ಮೇಲೆ ದೂರು ದಾಖಲಿಸಿದ RTI ಕಾರ್ಯಕರ್ತ ರಾಜ್ಯಾಧ್ಯಕ್ಷರಾಗಿ ರಾಜ್ಯದ ಸರ್ಕಾರಿ ನೌಕರರ ಪರ ಮಾತನಾಡಿದರೆ ದೂರು ದಾಖಲು

Suddi Sante Desk
ಸರ್ಕಾರಿ ನೌಕರರಿಗೆ ಬೆದರಿಕೆ ಹಾಕಿ ಬ್ಲಾಕ್ಮೇಲ್ ಮಾಡಿ ಕಿರುಕುಳ ನೀಡಿದರೆ ಸಹಿಸೊದಿಲ್ಲ ಎಂದ ರಾಜ್ಯಾಧ್ಯಕ್ಷರ ಮೇಲೆ ದೂರು ದಾಖಲಿಸಿದ RTI ಕಾರ್ಯಕರ್ತ ರಾಜ್ಯಾಧ್ಯಕ್ಷರಾಗಿ ರಾಜ್ಯದ ಸರ್ಕಾರಿ ನೌಕರರ ಪರ ಮಾತನಾಡಿದರೆ ದೂರು ದಾಖಲು

ಶಿವಮೊಗ್ಗ

ಯಾವುದೇ ಸರ್ಕಾರಿ ನೌಕರನು ತಪ್ಪು ಮಾಡಿದರೆ ಭ್ರಷ್ಟಾಚಾರ ಮಾಡಿದರೆ ಸೂಕ್ತ ದಾಖಲೆಗಳೊಂ ದಿಗೆ ದೂರನ್ನು ನೀಡಿ ಅದನ್ನು ಬಿಟ್ಟು ಸರ್ಕಾರಿ ನೌಕರರಿಗೆ ಬೆದರಿಕ ಹಾಕಿ ಬ್ಲಾಕ್ಮೇಲ್ ಮಾಡಿ ಕಿರುಕುಳ ನೀಡಿದರೆ ಅದನ್ನು ಸಹಿಸೊಪದಿಲ್ಲ ಎಂದು ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಹೇಳಿದ್ದಾರೆ

ಶಿವಮೊಗ್ಗ ದಲ್ಲಿ ಮಾತನಾಡಿದ ಅವರು ಹೀಗೆ ಹೇಳುತ್ತಿದ್ದಂತೆ ಅತ್ತ ರಾಜ್ಯಾಧ್ಯಕ್ಷರ ಮೇಲೆ RTI ಕಾರ್ಯಕರ್ತ ದೂರನ್ನು ದಾಖಲು ಮಾಡಿದ್ದಾನೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿರುದ್ಧ ದೂರನ್ನು ಸಾಮಾ ಜಿಕ ಕಾರ್ಯಕರ್ತ ದಾಖಲು ಮಾಡಿದ್ದಾನೆ

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಓಂಕಾರ ತಾಳಗುಪ್ಪ ಸಾಗರ ನಗರ ಠಾಣೆ ಪೊಲೀ ಸರಿಗೆ ದೂರು ನೀಡಿದ್ದಾರೆ.ಸಾಗರದ ಗಾಂಧಿ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ಏರ್ಪಡಿಸಿದ್ದ ಸಮಾ ವೇಶದಲ್ಲಿ ಸಿ.ಎಸ್.ಷಡಾಕ್ಷರಿ ಅವರು ಭಾಷಣ ಮಾಡುವಾಗ ನನಗೆ ಜೀವ ಬೆದರಿಕೆ ಹಾಕಿರುವು ದಾಗಿ ಓಂಕಾರ ತಾಳಗುಪ್ಪ ದೂರು ನೀಡಿದ್ದಾರೆ.

ತಾಲೂಕಿನ ಸರ್ಕಾರಿ ನೌಕರರಿಗೆ ತೊಂದರೆ ನೀಡಿದರೆ ನೀನು ಬದುಕುವುದು ಕಷ್ಟವಾಗುತ್ತದೆ ಎಂದು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.ದೂರು ಸ್ವೀಕರಿಸಿರುವ ಪೊಲೀ ಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ.ಎಸ್.ಷಡಕ್ಷರಿ ಅವರು ಭಾಷಣ ಮಾಡುವ ಸಂದರ್ಭದಲ್ಲಿ ಸರ್ಕಾರಿ ನೌಕರರು ಅಧಿಕಾರಿಗಳು ಕರ್ತವ್ಯ ಲೋಪವೆಸಗಿದರೆ ಸಂಬಂಧಿಸಿದ ವ್ಯಕ್ತಿ ಕಾನೂನು ಬದ್ಧವಾಗಿ ಪ್ರಶ್ನೆ ಮಾಡಲಿ.ಅದನ್ನು ಬಿಟ್ಟು ಬೆದರಿಕೆ ಹಾಕುವುದು ಬ್ಲಾಕ್ಮೇಲ್ ಮಾಡಿ ಕಿರುಕುಳ ನೀಡುವುದು ಸರಿಯಲ್ಲ.ಅದನ್ನು ಸಹಿಸುವುದಿಲ್ಲ ಎಂದು ಹೇಳಿದ್ದೇನೆ ಹೊರತೂ ಯಾವ ಬೆದರಿಕೆಯನ್ನು ಹಾಕಿಲ್ಲ ವ್ಯಕ್ತಿಯ ವಿರುದ್ಧ ನಾವು ಎರಡು ದೂರು ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.