ಓಪಿಎಸ್ ಜಾರಿ ನಮ್ಮ ಗುರಿ ನುಡಿದಂತೆ ನಡೆದಿದ್ದೇವೆ ಮತ್ತು ನಡೆಯುತ್ತೇವೆ ಎಂದ ಸಂತೋಷ ಲಾಡ್ OPS ನಿರೀಕ್ಷೆ ಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಅಭಯ ನೀಡಿದ ಸಚಿವರು…..

Suddi Sante Desk
ಓಪಿಎಸ್ ಜಾರಿ ನಮ್ಮ ಗುರಿ ನುಡಿದಂತೆ ನಡೆದಿದ್ದೇವೆ ಮತ್ತು ನಡೆಯುತ್ತೇವೆ ಎಂದ ಸಂತೋಷ ಲಾಡ್ OPS ನಿರೀಕ್ಷೆ ಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಅಭಯ ನೀಡಿದ ಸಚಿವರು…..

ಧಾರವಾಡ

ಓಪಿಎಸ್ ಜಾರಿ ನಮ್ಮ ಗುರಿ ನುಡಿದಂತೆ ನಡೆದಿದ್ದೇವೆ ಮತ್ತು ನಡೆಯುತ್ತೇವೆ ಎಂದ ಸಂತೋಷ ಲಾಡ್ OPS ನಿರೀಕ್ಷೆ ಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಅಭಯ ನೀಡಿದ ಸಚಿವರು ಹೌದು ಸರಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದು, ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಪ್ರಯತ್ನಿಸಬೇಕು.

ರಾಜ್ಯ ಸರಕಾರ ನುಡಿದಂತೆ ನಡೆದಿದ್ದು ರಾಜ್ಯ ಸರಕಾರಿ ನೌಕರರಿಗೆ ನೀಡಿದ್ದ, ಓಪಿಎಸ್ ಜಾರಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕೆ ಕಾಲವಕಾಶ ಅಗತ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಹೇಳಿದರು.

ಧಾರವಾಡ ದಲ್ಲಿ ಮಾತನಾಡಿದ ಅವರು ಪ್ರತಿದಿನ ಒತ್ತಡಗಳಲ್ಲಿ ಕೆಲಸ ಮಾಡುವ ಸರಕಾರಿ ನೌಕರರು ಪ್ರತಿದಿನವೂ ಬಿಡುವು ಮಾಡಿಕೊಂಡು ವ್ಯಾಯಾಮ ಮಾಡುವ ಹವ್ಯಾಸ ರೂಢಿಸಿಕೊಳ್ಳ ಬೇಕು. ಎಲ್ಲರಿಗೂ ಆರೋಗ್ಯ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಅತೀ ಮುಖ್ಯವಾಗಿರುವುದರಿಂದ ವ್ಯಾಯಾಮ, ಕ್ರೀಡೆಗಳ ಮೂಲಕ ಅದನ್ನು ಸದೃಢವಾಗಿ ಕಾಪಾಡಿಕೊಳ್ಳುವುದು ನಮ್ಮ ಜವಾಬ್ದರಿಯಾಗಿದೆ ಎಂದು ಅವರು ಹೇಳಿದರು.

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಜೀವನ ಶೈಲಿ ಮುಖ್ಯವಾಗಿದೆ. ಆಹಾರ, ಓದು, ಸಂಗೀತ, ವಿಹಾರದಂತ ಹವ್ಯಾಸ ಬೆಳೆಸಿಕೊಳ್ಳಬೇಕು. ಮತ್ತು ತಮ್ಮ ಮಕ್ಕಳಲ್ಲಿ ರಾಷ್ಟಭಕ್ತಿ, ನೈತಿಕ ಶಿಕ್ಷಣ ಮೂಡಿಸುವ ಕಾರ್ಯವಾಗಬೇಕು ಎಂದು ಸಚಿವರು ತಿಳಿಸಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.