This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಕರ್ತವ್ಯಕ್ಕೆ ಗೈರಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ…..ಮಾತುಕತೆ ಮಾಡದೆ ಎಚ್ಚರಿಕೆ ಸಂದೇಶ ನೀಡಿರ ಸರ್ಲಾಕ…..

ಕರ್ತವ್ಯಕ್ಕೆ ಗೈರಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ…..ಮಾತುಕತೆ ಮಾಡದೆ ಎಚ್ಚರಿಕೆ ಸಂದೇಶ ನೀಡಿರ ಸರ್ಲಾಕ…..
WhatsApp Group Join Now
Telegram Group Join Now

ಬೆಂಗಳೂರು

ಅನುಮತಿ ಪಡೆಯದೇ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮವನ್ನು ಕೈಗೊಳ್ಳುವ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ.ಹೌದು 7ನೇ ವೇತನ ಆಯೋಗ ಜಾರಿ,ಹಳೆ ಪಿಂಚಣಿ ವ್ಯವಸ್ಥೆ ಯ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಈ ಬೆನ್ನಲ್ಲೇ ಅನಧಿಕೃತವಾಗಿ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆದೇಶದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.ಈ ಬಗ್ಗೆ ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳ ವಿಶೇಷಾ ಧಿಕಾರಿ ಸುತ್ತೋಲೆ ಹೊರಡಿಸಿದ್ದು ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ, ಮುಂಚಿತ ವಾಗಿಯೇ ಅಧಿಕೃತವಾಗಿ ರಜೆ ಮಂಜೂರಾತಿ ಯನ್ನು ಪಡೆಯುವಂತೆ ಸೂಚಿಸಲಾಗಿದೆ.

ಇನ್ನೂ ಒಂದು ವೇಳೆ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿದೆ.

ತಡರಾತ್ರಿಯವರೆಗೆ ಸಿಎಂ ಬೊಮ್ಮಾಯಿ ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಬೇಡಿಕೆ ಈಡೇರಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಎಂ ಬೊಮ್ಮಾಯಿಯವರು ಶೇ.7 ರಿಂದ 8ರಷ್ಟು ಮಧ್ಯಂತರ ವೇತನ ಜಾರಿಗೊಳಿಸೋದಾಗಿ ತಿಳಿಸಿ ದ್ದಾರೆ ಆದ್ರೇ ಇದಕ್ಕೆ ನೌಕರರು ಒಪ್ಪಿಕೊಂಡಿಲ್ಲ . ಹೀಗಾಗಿ ಇಂದು ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಎಚ್ಚರಿಕೆಯ ನಡುವೆ ಆಗಲಿದೆ ಎಂದು ಹೇಳಲಾಗುತ್ತಿದ್ದು ಏನೇನಾಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk