ಬೆಳ್ಳಂ ಬೆಳಿಗ್ಗೆ ಶಾಲಾ ವಾಹನ ಪಲ್ಟಿ ತಪ್ಪಿತು ದೊಡ್ಡ ಅವಘಡ ವಿದ್ಯಾರ್ಥಿ ಗಳಿಗೆ ಗಾಯ…..

Suddi Sante Desk

ಶ್ರವಣಬೆಳಗೊಳ(ಹಾಸನ) –

ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಶಾಲಾ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಶ್ರವಣಬೆಳಗೊ ಳದ ಅರುವನಹಳ್ಳಿ ಗೇಟ್ ಬಳಿ ನಡೆದಿದೆ.ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪಲ್ಟಿಯಾದ ವಾಹನ ವನ್ನು ಮಂಜುನಾಥ ಎಜುಕೇಷನ್ ಟ್ರಸ್ಟ್‌ ಬಿಎಂಎಚ್ ಪಬ್ಲಿಕ್ ಶಾಲೆಗೆ ಸೇರಿದೆ.ಶ್ರವಣಬೆಳ ಗೊಳ ಹೋಬಳಿಯ ಪರಮ ಗ್ರಾಮಕ್ಕೆ ಶಾಲೆಯಿಂದ ವಿದ್ಯಾರ್ಥಿಗಳನ್ನು ಬಿಡಲು ಹೋಗುತ್ತಿದ್ದ ವೇಳೆ ಕೆರೆಯ ಸಮೀಪ ಬಸ್ ಪಲ್ಟಿಯಾಗಿದೆ.ಘಟನೆಯಲ್ಲಿ 6 ರಿಂದ 7 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಇನ್ನೂ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಶ್ರವಣಬೆಳಗೊಳದ ಪಿಎಸ್‌ಐ ಸ್ವಾಮಿ ಸೇರಿದಂತೆ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ.ಈ ಹಿಂದೆಯೂ ಇದೇ ಚಾಲಕನ ನಿರ್ಲಕ್ಷ್ಯದಿಂದ ಶಾಲಾ ವಾಹನ ಅಪಘಾತಕ್ಕೀಡಾಗಿತ್ತು ಎಂಬ ದೂರು ಸಹ ಕೇಳಿ ಬಂದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.