ಹುಟ್ಟು ಹಬ್ಬದ ದಿನದಂದೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಹಿರಿಯ ಸಂಸದ ಶ್ರೀನಿವಾಸ್ ಪ್ರಸಾದ್…..

Suddi Sante Desk

ಮೈಸೂರು –

ರಾಜ್ಯದ ಹಿರಿಯ ರಾಜಕಾರಣಿ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಹೌದು ಸಕ್ರಿಯ ರಾಜ ಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ವಿಶೇಷವಾಗಿ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿ ರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಹುಟ್ಟಿದ ದಿನವಾದ ಇಂದು ಅಂದರೆ ಆಗಸ್ಟ್ 6ರಂದು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿದ್ದಾರೆ ನನ್ನ ಆತ್ಮತೃಪ್ತಿಯಿಂದಲೇ ಚುನಾವಣಾ ರಾಜಕೀ ಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ ಈ ಬಗ್ಗೆ ಬೇಸರ ವಿಲ್ಲ,ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸು ವುದಿಲ್ಲ 14 ಬಾರಿ ಚುನಾವಣೆಯಲ್ಲಿ ನಿಂತು ನನಗೆ ಸಾಕು ಅನಿಸಿದೆ ಎಂದರು.

ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯ ಸಿದ್ದೆ.ಆದರೆ ರಾಜಕೀಯ ಬೆಳವಣಿಗೆಗಳು ಬೇರೆ ತಿರುವು ಪಡೆದ ಕಾರಣ ಸ್ಪರ್ಧೆ ಮಾಡಬೇಕಾಯಿತು. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ, ನನ್ನ ನಿರ್ಧಾರವನ್ನು ಬದಲಿಸುವುದೂ ಇಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷದ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಇನ್ನು ಕೆಲವು ನಾಯಕ ರೊಂದಿಗೆ ಮನಸ್ತಾಪ ಉಂಟಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು.
ಇದು ನನ್ನ ಅಂತಿಮ ನಿಲುವು ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ. ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ.50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲಾ ಏಳು ಬೀಳುಗಳನ್ನು ದಾಖಲಿಸಿ ದ್ದೇನೆ ಎಂದು ಸಹ ಪ್ರಕಟಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.