This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ – ಬಹಿ ನಿರೀಕ್ಷಿತ ಏಳನೇ ವೇತನ ಆಯೋಗದ ಸೌಲಭ್ಯಗಳು ನೌಕರರಿಗೆ ಸಿಗಲಿವೆ ಎಂದರು ಷಡಾಕ್ಷರಿ ಅವರು…..

WhatsApp Group Join Now
Telegram Group Join Now

ಉಡುಪಿ –

ಡಿಸೆಂಬರ್ ತಿಂಗಳೊಳಗೆ ರಾಜ್ಯದ ಸರಕಾರಿ ನೌಕರರ ಬಹುನಿರೀಕ್ಷಿತ ಏಳನೇ ವೇತನ ಆಯೋಗದ ಸೌಲಭ್ಯಗ ಳನ್ನು ನೌಕರರಿಗೆ ದೊರಕಿಸುವಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬದ್ಧವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಮಾವೇಶ ಮತ್ತು ಸೇವಾ ನಿವೃತ್ತಿ ಗೊಳ್ಳುತ್ತಿರುವ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಅವರ ಅಭಿನಂ ದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು.

ಇನ್ನೂ ಸರಕಾರಿ ನೌಕರರ ೭ನೇ ವೇತನ ಆಯೋಗದ ರಚನೆ ಕುರಿತಂತೆ ಒಂದು ತಿಂಗಳೊಳಗೆ ಸಮಿತಿ ರಚನೆಯಾ ಗಲಿದ್ದು, ಇದೇ ಡಿಸೆಂಬರ್ ಒಳಗೆ ಆರ್ಥಿಕ ಸೌಲಭ್ಯಗಳನ್ನು ನೌಕರರಿಗೆ ನೀಡುವಂತೆ ಸರಕಾರದ ಮೇಲೆ ಈಗಾಗಲೇ ಒತ್ತಡ ಹಾಕಲಾಗಿದೆ. ಡಿ ದರ್ಜೆ ನೌಕರರಿಗೆ ೧೦೦೦೦ರೂ., ಸಿ ದರ್ಜೆ ನೌಕರರರಿಗೆ ೨೦೦೦೦ರೂ.ಬಿ ದರ್ಜೆ ಅಧಿಕಾರಿಗ ಳಿಗೆ ೩೦೦೦೦ರೂ.ಹಾಗೂ ಎ ದರ್ಜೆ ಅಧಿಕಾರಿಗಳಿಗೆ ಕನಿಷ್ಠ ೪೦೦೦೦ರೂ ವರೆಗೆ ವೇತನ ಹೆಚ್ಚಳವಾಗಲಿದೆ ಎಂದರು.

ರಾಜ್ಯದ ಸರಕಾರಿ ನೌಕರರಿಗೆ ನಗದು ರಹಿತ ಶೇ.100 ಉಚಿತ ಆರೋಗ್ಯ ಚಿಕಿತ್ಸೆ ನೀಡುವ ಯೋಜನೆ ಕೂಡ ಶೀಘ್ರದಲ್ಲಿ ಜಾರಿಯಾಗಲಿದೆ. ಈ ಕುರಿತಂತೆ ಅಂತಿಮ ಸಭೆ ನಡೆಯಲಿದ್ದು ಈ ಯೋಜನೆಯ ಮೂಲಕ ನೌಕರರು ಮತ್ತು ಅವರ ಅವಲಂಬಿತರು ಯಾವುದೇ ಕಾಯಿಲೆಗಳಿಗೆ ಒಂದು ಲಕ್ಷದಿಂದ ಒಂದು ಕೋಟಿ ರೂ.ವರೆಗೆ ಯಾವುದೇ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ ವಾಗಲಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ರಾಜ್ಯದ ೬ ಲಕ್ಷ ನೌಕರರ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಇವುಗ ಳನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟಿದೆ.ಯಾವುದೇ ಪ್ರತಿಭಟನೆ ಮುಷ್ಕರಗಳಿಲ್ಲದೇ ಮನವಿ ನೀಡುವ ಮೂಲಕ ಹಂತಹಂತವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಸರಕಾರಿ ನೌಕರರ ಸೇವಾವಹಿಗಳನ್ನು ಆನ್‌ಲೈನ್ ಮಾಡ ಲಾಗುತ್ತಿದ್ದು ಎಚ್‌ಆರ್ ಎಂಎಸ್,ಮಹಾಲೇಖಪಾಲರ ಕಚೇರಿ ಮತ್ತು ಖಜಾನೆ ಗಳನ್ನು ಪರಸ್ಪರ ಜೋಡಣೆ ಮಾಡುವ ಮೂಲಕ ನಿವೃತ್ತಿ ನೌಕರರು ನಿವೃತ್ತಿ ದಿನವೇ ಪಿಂಚಣಿ ಪಡೆಯುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ.ಮಾತನಾಡಿ ಸಂಘವು ನೌಕರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ನಿರಂತರ ತರಬೇತಿ ಕಾರ್ಯಕ್ರಮ ನಡೆಸುವ ಕುರಿತು ಯೋಜನೆ ರೂಪಿಸಬೇಕು.ತಮ್ಮ ಹಾಗೂ ಕುಟುಂಬದ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು.ಮದ್ಯ ವ್ಯಸನಿ ನೌಕರ ರನ್ನು ಅದರಿಂದ ಹೊರ ತರಲು ಯೋಜನೆ ಹಾಕಿಕೊಳ್ಳ ಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳಾದ ವೆಂಕಟೇಶಯ್ಯ,ಮಲ್ಲಿಕಾರ್ಜುನ ಬಳ್ಳಾರಿ,ರುದ್ರಪ್ಪ,ಬಸವರಾಜು,ರವಿ, ಮೋಹನ್ ಕುಮಾರ್ ಹರ್ಷ,ಸತೀಶ್ ಸಿದ್ದರಾಮಣ್ಣ,ದ.ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಕೃಷ್ಣ,ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ,ಜಿಲ್ಲಾ ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶರೀಪ ಮರೋಣ,ಕಾರ್ಕಳ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಹೆಬ್ರಿ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ,ಕಾಪು ಅಧ್ಯಕ್ಷ ನಾಗೇಶ್ ಬಿಲ್ಲವ ಉಪಸ್ಥಿತರಿ ದ್ದರು.

ಅಭಿನಂದನಾ ಸಮಿತಿ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಸ್ವಾಗತಿಸಿದರು.ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.ಸಮಿತಿ ಸದಸ್ಯ ಗಣಪತಿ ಹೋಬಳಿದಾರ್ ವಂದಿಸಿದರು.


Google News

 

 

WhatsApp Group Join Now
Telegram Group Join Now
Suddi Sante Desk