ರಾಜ್ಯದ ಶಿಕ್ಷಕರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ ಷಡಾಕ್ಷರೊಯವರು – ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಚರ್ಚೆ ಸಮಸ್ಯೆಗಳ ಕುರಿತು ಮನವಿ ಬೇಡಿಕೆ…..

Suddi Sante Desk
ರಾಜ್ಯದ ಶಿಕ್ಷಕರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ ಷಡಾಕ್ಷರೊಯವರು – ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಚರ್ಚೆ ಸಮಸ್ಯೆಗಳ ಕುರಿತು ಮನವಿ ಬೇಡಿಕೆ…..

ಬೆಂಗಳೂರು

ರಾಜ್ಯಾಧ್ಯಕ್ಷರಾದ  ಸಿ.ಎಸ್.ಷಡಾಕ್ಷರಿರವರು, ಶಿಕ್ಷಣ ಇಲಾಖೆಯ ಶಿಕ್ಷಕರ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ್ದಾರೆ ಹೌದು ಈ ಕೆಳಕಂಡ ಸಮಸ್ಯೆಗಳ ಬಗ್ಗೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್ ಭಾ.ಆ.ಸೇ ರವರನ್ನು ಭೇಟಿ ಮಾಡಿ ಚರ್ಚಿಸಿದರು.

ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮುಖ್ಯ ಶಿಕ್ಷಕರು, ಶಿಕ್ಷಕರು, ಉಪನ್ಯಾಸಕರು ಮತ್ತು ಭೋಧಕೇತರ ಅಧಿಕಾರಿ-ಸಿಬ್ಬಂದಿಗಳಿಗೆ ವರ್ಗಾ ವಣೆಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಲಾಯಿತು- ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದಂತೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ನ್ಯಾಯಾಲಯದ ಆದೇಶದಂತೆ ಶಿಕ್ಷಕರನ್ನು ಮತಗಟ್ಟೆ ಅಧಿಕಾರಿ (ಬಿ.ಎಲ್.ಓ) ಕರ್ತವ್ಯಕ್ಕೆ ನಿಯೋಜಿಸದಂತೆ ಮನವಿ ಮಾಡಲಾಯಿತು-ಈ ಬಗ್ಗೆ (ಸಿಇಒ) ಮುಖ್ಯ ಚುನಾವಣಾ ಅಧಿಕಾರಿ ರವರೊಂದಿಗೆ ಪತ್ರ ವ್ಯವಹಾರ ನಡೆಸಿ ಶಿಕ್ಷಕರನ್ನು ನಿಯೋಜಿಸದಂತೆ ಕ್ರಮವಹಿಸಲಾಗು ವುದೆಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಭೋಧಕೇತರ ನೌಕರರ ವರ್ಗಾವಣೆ ಕೌನ್ಸಿಲಿಂಗ್ ನಲ್ಲಿ ಪರಸ್ಪರ ವರ್ಗಾವಣೆಗೆ ಅವಕಾಶ ನೀಡುವಂತೆ ಮತ್ತು ಈ ಹಿಂದೆ ಗೈರು ಹಾಜ ರಾದವರನ್ನು ಸಹ ವರ್ಗಾವಣೆಗೆ ಪರಿಗಣಿಸುವಂತೆ ಮನವಿ ಮಾಡಲಾಯಿತು- ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಳ್ಳಾರಿ, ಆರ್.ಮೋಹನ್ ಕುಮಾರ್, ಬಸವರಾಜ್ ಬಳೂಂಡಗಿ, ನೆಲ್ಕುದ್ರಿ ಸದಾನಂದ, ಚೇತನ್ ರಾಜು, ಇತರರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.