This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

CM ಗೆ ಮತ್ತೊಂದು ಪತ್ರವನ್ನು ಬರೆದ ಷಡಾಕ್ಷರಿ ಯವರು – ರಾಜ್ಯದ ಸರ್ಕಾರಿ ನೌಕರರ ಧ್ವನಿಯಾಗಿ ಬರೆದ ಪತ್ರದಲ್ಲಿ ಏನೇನು ಬೇಡಿಕೆ ಇಟ್ಟಿದ್ದಾರೆ ನೋಡಿ……

CM ಗೆ ಮತ್ತೊಂದು ಪತ್ರವನ್ನು ಬರೆದ ಷಡಾಕ್ಷರಿ ಯವರು – ರಾಜ್ಯದ ಸರ್ಕಾರಿ ನೌಕರರ ಧ್ವನಿಯಾಗಿ ಬರೆದ ಪತ್ರದಲ್ಲಿ ಏನೇನು ಬೇಡಿಕೆ ಇಟ್ಟಿದ್ದಾರೆ ನೋಡಿ……
WhatsApp Group Join Now
Telegram Group Join Now

ಬೆಂಗಳೂರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಿಂದ ಮುಖ್ಯಮಂತ್ರಿಗೆ ಮತ್ತೊಂದು ಪತ್ರವೊಂ ದನ್ನು ಬರೆಯಲಾಗಿದೆ ಹೌದು ಕೇಂದ್ರ ಸರ್ಕಾರದ ಮಾದರಿಯಲ್ಲಿ ದಿನಾಂಕ 01/04/2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯ ನ್ವಯ ನೇಮಕಾತಿ ಹೊಂದಿರುವ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿ ಸುವ ಬಗ್ಗೆ ವಿಷಯವನ್ನು ಪ್ರಸ್ತಾಪಿಸಲಾಗಿದೆ.

ಕೇಂದ್ರ ಸರ್ಕಾರವು ಉಲ್ಲೇಖಿತ ಅಧಿಸೂಚನೆಯ ನ್ವಯ ದಿನಾಂಕ 22/12/2003ಕ್ಕಿಂತ ಪೂರ್ವ ದಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ವಯ ಕೇಂದ್ರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಆದೇಶಿ ಸಿರುತ್ತದೆ.ಕರ್ನಾಟಕ ರಾಜ್ಯದಲ್ಲಿ ದಿನಾಂಕ 01/04/2006ರಿಂದ ನೂತನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಯೋಜನೆ ಜಾರಿಗೊಳಿಸುವ ಪೂರ್ವದಲ್ಲಿ ಹೊರಡಿಸಲಾದ ಸರ್ಕಾರದ ಅಧಿಸೂಚನೆಯ ನ್ವಯ ನೇಮಕಾತಿ ಪ್ರಕ್ರಿಯೆಗಳು, ನ್ಯಾಯಾಲ ಯದ ಮೊಕದ್ದಮೆಗಳೂ ಸೇರಿದಂತೆ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ವಿಳಂಬ ವಾಗಿವೆ ಅಂದರೆ ದಿನಾಂಕ 01/04/2006ರ ನಂತರ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರನ್ನು ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿರು ವುದು ಸ್ವಾಭಾವಿಕ ನ್ಯಾಯತತ್ವಕ್ಕೆ ವಿರುದ್ಧ ವಾಗಿರುತ್ತದೆ.

 

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉಲ್ಲೇಖಿತ ಅದಿಸೂಚನೆಯನ್ವಯ ಕಲ್ಪಿಸಿರುವ ಅವಕಾಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸಹ ದಿನಾಂಕ 01/04/2006ರ ಪೂರ್ವದಲ್ಲಿ ಹೊರಡಿಸಿದ ನೇಮಕಾತಿ ಅಧಿಸೂ ಚನೆಯನ್ವಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡು ತಡವಾಗಿ 1/4/2006ರ ನಂತರ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿ ಪರಿಗಣಿಸಿ ಪಿಂಚಣಿ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk