ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತ ಸಹಾಯಕ ಕೋವಿಡ್ ಗೆ ಬಲಿ – ಕಳೆದ 40 ವರ್ಷಗಳಿಂದ ಆಪ್ತ ಸಹಾಯಕನಾಗಿದ್ದ ಶಂಕರ್

Suddi Sante Desk

ಮೈಸೂರು –

ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಆಪ್ತ ಸಹಾ ಯಕ ಮಹಾಮಾರಿಗೆ ಬಲಿಯಾಗಿದ್ದಾರೆ. ಹೌದು ಶಂಕರ್(78) ಕೊರೊನಾಗೆ ಬಲಿಯಾದ ಆಪ್ತ ಸಹಾ ಯಕರಾಗಿದ್ದಾರೆ. ಕಳೆದ 40 ವರ್ಷಗಳಿಂದ ಶ್ರೀನಿವಾ ಸ್ ಪ್ರಸಾದ್ ಬಳಿ ಆಪ್ತ ಸಹಾಯಕರಾಗಿ ಶಂಕರ್ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಇವರಲ್ಲಿ ಸೋಂಕು ಕಾಣಿಸಿಕೊಂಡಿತ್ತು

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.ಆಪ್ತ ಸಹಾಯಕ ಸಾವಿಗೆ ಸಂಸದರು ಕಂಬನಿ ಮಿಡಿದಿದ್ದಾರೆ.ಆಕ್ಸಿಜನ್ ಸಮ ಯಕ್ಕೆ ಸರಿಯಾಗಿ ಸಿಗದ ಕಾರಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ರಮೇ ಶ್ ಮೃತಪಟ್ಟಿದ್ದರು.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಮೇಶ್ ಅವರು ಖಾಸಗಿ ಆಸ್ಪತ್ರೆಯ ಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.ಇದರ ಬೆನ್ನಲ್ಲಿಯೇ ಸದ್ಯ ಶ್ರೀನಿವಾಸ್ ಪ್ರಸಾದ್ ಅವರ ಆಪ್ತ ಸಹಾಯ ಕ ಬಲಿಯಾಗಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.