ACB ಬಲೆಗೆ ಕಂದಾಯ ನಿರೀಕ್ಷಕ – ಉತಾರ ನೋಂದಣಿಗೆ ರೈತನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಶಿವಾನಂದ

Suddi Sante Desk

ಹುಬ್ಬಳ್ಳಿ –

ಹೊಸ ಉತಾರ ದಾಖಲೆಗೆ ರೈತನ ಬಳಿ ಹಣದ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ರೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ದಲ್ಲಿ ನಡೆದಿದೆ. ಕುಂದಗೋಳ ಪಟ್ಟಣ ದಲ್ಲಿ ಈ ಒಂದು ಘಟನೆ ನಡೆದಿದ್ದು.ಕಂದಾಯ ನಿರೀಕ್ಷಕ ಶಿವಾನಂದ ಬೇಮನ್ನವರ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕರಾಗಿದ್ದಾರೆ. ರೈತರೊಬ್ಬರ ಜಮೀನಿನ ಹೊಸ ಉತಾರವನ್ನು ದಾಖಲು ಮಾಡಲು 35 ಸಾವಿರ ಹಣದ ಬೇಡಿಕೆಯನ್ನು ಇಟ್ಟಿದ್ದರು.

ಈ ಕುರಿತಂತೆ ಎಸಿಬಿ ಗೆ ರೈತ ದೂರನ್ನು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿದ ಅಧಿಕಾರಿಗಳು ಕಂದಾಯ ನಿರೀಕ್ಷಕರನ್ನು ಬಲಗೆ ಹಾಕಿದ್ದಾರೆ.ಡಿವೈಎಸ್ಪಿ ವೇಣುಗೋಪಾಲ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೇಕ್ಟರ್ ಅಧಿಕಾರಿಗಳಾದ ಅಲಿಶೇಖ,ವಿ ಎನ್ ಖಡಿ, ಇವರೊಂದಿಗೆ ಸಿಬ್ಬಂದಿಗಳಾದ ಲೊಕೇಶ ಬೆಂಡಿಕಾಯಿ, ಗಿರೀಶ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಸಧ್ಯ ಕಂದಾಯ ನಿರೀಕ್ಷಕರನ್ನು ವಶಕ್ಕೆ ತಗೆದುಕೊಂಡಿದ್ದು ಮುಂದಿನ ಕಾರ್ಯವನ್ನು ಮಾಡುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.