ವರದಿ ಪ್ರಸಾರ ಮಾಡದಂತೆ ನ್ಯಾಯಾಲಯ ಮೆಟ್ಟಿಲೇರಿದ ಆರು ಸಚಿವರು…..

Suddi Sante Desk

ಬೆಂಗಳೂರು –

ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣ ಬಯಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಮತ್ತೊಂದು ಮಹತ್ವದ ಬೆಳವಣಿಗೆ ಯಾಗಿದೆ‌. ಹೌದು ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಬಾಂಬೆಯಲ್ಲಿ ಬೀಡು ಬಿಟ್ಟಿದ್ದ ಆರು ಸಚಿವರು, ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ. ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ನಾಳೆ ಆದೇಶ ನೀಡುವ ಸಾಧ್ಯತೆಯಿದೆ ಕೋರ್ಟ್ ಮೊರೆ ಹೋಗಿರುವ ಆರು ಸಚಿವರ ನಡೆ ತೀವ್ರ ಕುತೂಹಲ ಕೆರಳಿಸಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು. ಇದರೊಂದಿಗೆ ಯಾವ ಕಾರಣಕ್ಕಾಗಿ ಇವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು ಎಂಬುದು ಕುತೂಹಲ ಕೆರಳಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.