This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಸಮೀಕ್ಷಾ ಕಾರ್ಯಕ್ಕೆ ಗೈರಾಗುವ ನೌಕರರಿಗೆ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ – ಎಚ್ಚರಿಕೆ ಸಂದೇಶ ದೊಂದಿಗೆ ಖಡಕ್ ಆದೇಶ ಮಾಡಿದ ರಾಜ್ಯ ಸರ್ಕಾರ…..

ಸಮೀಕ್ಷಾ ಕಾರ್ಯಕ್ಕೆ ಗೈರಾಗುವ ನೌಕರರಿಗೆ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ – ಎಚ್ಚರಿಕೆ ಸಂದೇಶ ದೊಂದಿಗೆ ಖಡಕ್ ಆದೇಶ ಮಾಡಿದ ರಾಜ್ಯ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷಾ ಕಾರ್ಯಕ್ರಮ ಆರಂಭವಾಗಿದ್ದು ಈ ಒಂದು ಕಾರ್ಯಕ್ಕೆ ಹಾಜರಾಗದ ನೌಕರರ ಶಿಕ್ಷಕರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳ ಲು ಸರ್ಕಾರದಿಂದ ಖಡಕ್ ಆದೇಶವನ್ನು ಮಾಡಲಾಗಿದೆ
ಹೌದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳನ್ನು ಗುರುತಿಸುವ ಸಲುವಾಗಿ ಸಮೀಕ್ಷೆ ಯನ್ನು ನಡೆಸಲು ಉದ್ದೇಶಿಸಲಾಗಿದೆ.ಅದರಂತೆ, ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಡುವ ಗ್ರೂಪ್-‘ಬಿ’, ‘ಸಿ’ ಮತ್ತು ‘ಡಿ’ ವೃಂದದ ಅಧಿಕಾರಿ ನೌಕರರುಗಳು ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದಿದ್ದಲ್ಲಿ ಅಥವಾ ಪಾಲ್ಗೊಂಡು ಕರ್ತವ್ಯ ನಿರ್ವಹಣೆ ಮಾಡದೇ ಇರುವಂತಹ ಅಧಿಕಾರಿ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ

ಈ ಹಿಂದೆ ಪರಿಶಿಷ್ಟ ಜಾತಿಯ ಸಮೀಕ್ಷೆ-2025ರ ಕಾರ್ಯಕ್ಕಾಗಿ ನಿಯೋಜಿಸಲಾಗಿದ್ದ ಹೆಚ್ಚಿನ ಸಂಖ್ಯೆಯ ನೌಕರರುಗಳು ಸಮೀಕ್ಷಾ ಕಾರ್ಯಕ್ಕೆ ಹಾಜರಾಗಿರು ವುದಿಲ್ಲ ಮತ್ತು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿರು ವುದಿಲ್ಲ. ಇದರಿಂದಾಗಿ ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿರು ವುದಿಲ್ಲ ಹಾಗೂ ಘಟನೋತ್ತರವಾಗಿ ನೌಕರರುಗಳ ವಿರುದ್ಧ ಕ್ರಮ ಕೈಗೊಳ್ಳುವುದು ಕಾರ್ಯಸಾಧ್ಯ ವಾಗುವುದಿಲ್ಲ ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಆದೇಶ ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಹೇಳಿ ಆದೇಶ ಮಾಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk