This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State Newsಯಾದಗಿರಿ

ಆನೆ ಕಾಲು ಮಾತ್ರೆ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು – ಪೋಷಕರ ಪ್ರತಿಭಟನೆ ಆಕ್ರೋಶ ಗುಣಮುಖರಾಗುತ್ತಿರುವ ವಿದ್ಯಾರ್ಥಿಗಳು

ಆನೆ ಕಾಲು ಮಾತ್ರೆ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು – ಪೋಷಕರ ಪ್ರತಿಭಟನೆ ಆಕ್ರೋಶ ಗುಣಮುಖರಾಗುತ್ತಿರುವ ವಿದ್ಯಾರ್ಥಿಗಳು
WhatsApp Group Join Now
Telegram Group Join Now

ಯಾದಗಿರಿ

ಆನೆ ಕಾಲು ರೋಗದ ಮಾತ್ರೆಗಳನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಯಾದಗಿರಿ ಯಲ್ಲಿ ನಡೆದಿದೆ ಆನೆ ಕಾಲು ರೋಗ ತಡೆ ಮಾತ್ರೆ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ದ್ದಾರೆ. ಯಾದಗಿರಿಯ ತಾಲ್ಲೂಕಿನ ಶೆಟ್ಟಿಗೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಶೆಟ್ಟಿಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಆನೆಕಾಲು ಮಾತ್ರೆ ನೀಡಲಾಗಿತ್ತು ಮಾತ್ರೆ ಸೇವಿಸಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಆರಂಭ ವಾಗಿ ಸುಮಾರು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ಗೊಂಡಿದ್ದರಿಂದ ತಕ್ಷಣ ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಶೆಟ್ಟಿಗೇರಿ ಗ್ರಾಮದ ಸಮೀಪದ ಕೌಳೂರ ಪ್ರಾಥಮಿಕ ವೈದ್ಯಾಧಿಕಾರಿ ತಕ್ಷಣ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಮಕ್ಕಳು ವಾಂತಿ-ಭೇದಿಯಿಂದ ಪರದಾಡುತ್ತಿದ್ದ ಸಂದರ್ಭದಲ್ಲಿ ವೈದ್ಯರು ಸರಿಯಾಗಿ ಸ್ಪಂದನೆ ನೀಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಗ್ರಾಮಕ್ಕೆ ಅನುಕೂಲವಾಗುವಂತೆ ಪ್ರಾಥಮಿಕ ಆಸ್ಪತ್ರೆ ಇದ್ದರೂ ಸಹ ಸೂಕ್ತ ಸಮಯದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ದೊರೆಯಲಿಲ್ಲ ಇದಕ್ಕೆ ಪ್ರಾಥಮಿಕ ವೈದ್ಯಾಧಿಕಾ ರಿಯೇ ನೇರ ಹೊಣೆ ಎಂದು ಕೌಳೂರ ವೈದ್ಯಾಧಿ ಕಾರಿ ಸುನೀಲ್ ರಾಯಚೂರಕರ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆಕಾಲು ರೋಗ ಬರದಂತೆ ತಡೆಯುವ ಸಲು ವಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ವತಿಯಿಂದ ಈ ಮಾತ್ರೆಯನ್ನು ನೀಡಲಾಗುತ್ತದೆ. ಆದರೆ ಇದೇ ಆನೆ ಕಾಲು ಮಾತ್ರೆ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಸಧ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಗುಣಮುಖ ರಾಗುತ್ತಿದ್ದಾರೆ.

 

 


Google News

 

 

WhatsApp Group Join Now
Telegram Group Join Now
Suddi Sante Desk