ಕಲಬುರಗಿ ಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಕಾನ್ಸ್ಟೇಬಲ್ ನ್ನು ಎಸ್ಪಿ ಅಮಾನತು ಮಾಡಲಾಗಿದೆ.ಹೌದು ಮರಳು ಸಾಗಾಣಿಕೆ ಸಂಬಂಧ 30 ಸಾವಿರ ರೂಪಾಯಿ ಲಂಚ ಪಡೆಯುವಾಗ ಜೇವರ್ಗಿಯ ಕಾನ್ಸ್ಟೇಬಲ್ ಶಿವರಾಯ್ ಮತ್ತು ಸಿಪಿಐ ಜೀಪ್ ಚಾಲಕ ಅವ್ವಣ್ಣ ಲೋಕಾಯುಕ್ತ ಪೊಲೀಸ್ ಬಲೆ ಬಿದ್ದಿದ್ದರು.ಇದರ ಬೆನ್ನಲ್ಲೇ ಮರಳು ದಂಧೆ ಕೋರನಿಂದ ಹಣಕ್ಕೆ ಬೇಡಿಕೆ ಇಟ್ಟ ಆಡಿಯೋ ವೈರಲ್ ಆಗಿದ್ದು
ಅಕ್ರಮ ಮರಳು ಸಾಗಾಟದ ಹಿಂದೆ ಪೊಲೀಸರ ಕೈವಾಡ ಇರುವುದು ಬಟಾಬಯಲಾಗಿದೆ. ಕಾನ್ಸಟೇಬಲ್ ಶಿವರಾಯ್ ಮತ್ತು ಜೀಪ್ ಚಾಲಕ ಅವ್ವಣ್ಣ ಮರಳು ದಂಧೆಕೋರರ ಜೊತೆ ಮಾತಾನಾಡಿರುವ ಆಡಿಯೋ ವೈರಲ್ ಆಗಿದೆ. ಮರಳು ಸಾಗಾಣಿಕೆ ಮಾಡಬೇಕಾದರೆ ಜೇವರ್ಗಿ ಸಿಪಿಐ ಶಿವಪ್ರಸಾದ್ ಮಟ್ಟದ್ ಅವರಿಗೆ 32 ಸಾವಿರ ರೂ ಕೊಡಬೇಕು ಅಂತಾ
ಇಬ್ಬರು ಆಡಿಯೋದಲ್ಲಿ ಬೇಡಿಕೆ ಇಟ್ಟಿದ್ದಾರೆ.
ನೀವು ದುಡ್ಡು ಕೊಟ್ಟು ಮರಳು ಸಾಗಿಸಬೇಕು ನಮ್ಮ ಬಳಿ ಪ್ರಿಪೇಯ್ಡ್ ಇದೆ ಯಾವಾಗಲು ಪೊಸ್ಟ್ ಪೇಯ್ಡ್ ಇರುವುದಿಲ್ಲ. ಎಲ್ಲರು ದುಡ್ಡು ಕೊಟ್ಟು ಮರಳು ಹೊಡೆಯುತ್ತಿದ್ದಾರೆ. ನೀವು ದುಡ್ಡು ಕೊಟ್ಟು ಮರಳು ಹೊಡೆದರೆ ಸಿಪಿಐ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ ದುಡ್ಡು ಕೊಟ್ಟ ನಂತರ ನಮ್ಮ ಸಾಹೇಬರು ಗಾಡಿ ಹಿಡಿಯೋದಿಲ್ಲ. ಈ ಹಿಂದೆ ಕೇಸ್ ಆದಾಗ ನಿನ್ನನ್ನು ಉಳಿಸಿಲ್ವ ನಿನಗೆ ಸಾಕಷ್ಟು ಸಹಾಯ ಮಾಡಿದ್ದೀವಿ. ಹೀಗಾಗಿ 32 ಸಾವಿರ ರೂ. ಕೊಡಬೇಕು ಎಂದು ಕಾನ್ಸ್ಟೇಬಲ್ ಇಬ್ಬರು ಮಾತನಾಡಿರುವುದು ಆಡಿಯೋದಲ್ಲಿದೆ. ಇನ್ನೂಈ ಒಂದು ಲಂಚ ಪ್ರಕರಣ ಸಂಬಂಧ ಜೇವರ್ಗಿ ಸಿಪಿಐ ಶಿವಪ್ರಸಾದ್ರನ್ನು ವಶಕ್ಕೆ ಪಡೆದಿದ್ದ ಲೋಕಾಯುಕ್ತರು ಜೇವರ್ಗಿ ತಾಲ್ಲೂಕಿನ ಅತಿಥಿ ಗೃಹದಲ್ಲಿ ತಡರಾತ್ರಿವರೆಗೂ ಮೂರು ವಿಚಾರಣೆ ನಡೆಸಿದರು. ಕೊನೆಗೆ ಮರಳು ದಂಧೆಯ ಲಂಚ ಪ್ರಕರಣದಿಂದ ಸಿಪಿಐರನ್ನು ಕೈ ಬಿಟ್ಟು, ಇಬ್ಬರು ಕಾನ್ ಸ್ಟೇಬಲ್ ನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.