IPL ಬೆಟ್ಟಿಂಗ್ ಗೆ ಬಲಿಯಾದ ಹಣ್ಣಿನ ವ್ಯಾಪಾರಿ – ನದಿಗೆ ಹಾರಿ ಪ್ರಾಣ ಬಿಟ್ಟ ಸೈಯದ್…..

Suddi Sante Desk

ಬಾಗಲಕೋಟ –

ಐಪಿಎಲ್ ಬೆಟ್ಟಿಂಗ್ ಗೆ ಹಣ್ಣಿನ ವ್ಯಾಪಾರಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಯಲ್ಲಿ ನಡೆದಿದೆ. ಹೌದು ಐಪಿಎಲ್ ಬೆಟ್ಟಿಂಗ್ ನಿಂದ ಲಕ್ಷ ಲಕ್ಷ ಸಾಲವನ್ನು ಮಾಡಿಕೊಂಡಿದ್ದ ಸೈಯದ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಲಕ್ಷಾಂತರ ರೂಪಾಯಿ ಸಾಲವನ್ನು ತೀರಿಸಲಾಗದೆ ನದಿಗೆ ಹಾರಿದ್ದಾರೆ ವ್ಯಾಪಾರಿ.

ಕಾತರಕಿ ಗ್ರಾಮದ ಬಳಿಯ ಘಟಪ್ರಭಾ ನದಿ ಸೇತುವೆ ಯಲ್ಲಿ ಈ ಒಂದು ಘಟನೆ ನಡೆದಿದೆ.ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕಾತರಕಿ ಬಳಿ ನಡೆದಿದ್ದು ಸಧ್ಯ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನ ಮಾಡತಾ ಇದ್ದಾರೆ.

ಸೈಯದ್ ಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯ ಮೀನುಗಾರರಿಂದ ಹುಡುಕಾಟವನ್ನು ಮಾಡಲಾಗುತ್ತಿದೆ ಇವರು ಬಾಗಲಕೋಟೆ ತಾಲ್ಲೂಕಿನ ಕಲಾದಗಿ ಗ್ರಾಮದ ನಿವಾಸಿಯಾಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.