ಕಿತ್ತೂರು –
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಸೇವೆ ಯಿಂದ ಅಮಾನತು ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಹುಲಿಕಟ್ಟಿ ಸರ್ಕಾರಿ ಪ್ರೌಢಶಾಲೆಯ ಎಸ್ ಜಿ ಗಡಾದ ಅಮಾನತಾದ ಶಿಕ್ಷಕ ರಾಗಿದ್ದಾರೆ.
ಶಾಲೆಗೆ ಪದೇ ಪದೇ ಗೈರಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಒಂದು ವಿಚಾರ ಕುರಿತು ಗ್ರಾಮಸ್ಥರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ ದೂರಿನ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ
ಸರಿಯಾಗಿ ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಡಿಡಿಪಿಐ ಅವರು ಇವರನ್ನು ಅಮಾನತು ಮಾಡಿದ್ದಾರೆ.