This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಶಿಕ್ಷಕರ ಪ್ರತಿಭಟನೆ – BEO ಕಚೇರಿ ಮುಂದೆ ಪ್ರತಿಭಟನೆ ಮನವಿ ಸಲ್ಲಿಕೆ…..

ಶಿಕ್ಷಕರ ಪ್ರತಿಭಟನೆ – BEO ಕಚೇರಿ ಮುಂದೆ ಪ್ರತಿಭಟನೆ ಮನವಿ ಸಲ್ಲಿಕೆ…..
WhatsApp Group Join Now
Telegram Group Join Now

ದೊಡ್ಡಬಳ್ಳಾಪುರ (ಬೆಂ.ಗ್ರಾಮಾಂತರ)

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಅವೈಜ್ಞಾನಿ ಕವಾಗಿ ಮನೆಗಳ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡಸಿದರು. ಇದರಿಂದಾಗಿ ತಾಲ್ಲೂಕಿನಲ್ಲಿ ಸಮೀಕ್ಷೆ ಆರಂಭವಾಗಲಿಲ್ಲ.ಸಮೀಕ್ಷೆಗೆ ನಿಯೋಜಿಸಲಾಗಿರುವ ಶಿಕ್ಷಕರಿಗೆ ವೈಜ್ಞಾನಿಕವಾಗಿ ಮನೆಗಳನ್ನು ಹಂಚಿಕೆ ಮಾಡಬೇಕು.

ನಿಯಮಾನುಸಾರ ಇತರ ಇಲಾಖೆಗಳ ನೌಕರರನ್ನೂ ಸಮೀಕ್ಷೆಗೆ ನಿಯೋಜಿಸಬೇಕು ಎಂದು ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಉಪವಿಭಾಗಾಧಿಕಾರಿ ಎನ್. ದುರ್ಗಾಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶಿಕ್ಷಕರನ್ನು ಅವರಿರುವ ಸ್ಥಳದಿಂದ 3 ಕಿ.ಮೀ ವ್ಯಾಪ್ತಿ ಯಲ್ಲಿ ಸಮೀಕ್ಷೆಗೆ ನಿಯೋಜಿಸಬೇಕು. ಆದರೆ, 20 ರಿಂದ 30 ಕಿ.ಮೀ ದೂರದ ಸಾಸಲು ಆರೂಢಿಯ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 48 ಇಲಾಖೆಯ ಇತರ ನೌಕರರನ್ನು ಸಹ ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳ ಲಾಗಿದೆ. ಇದರಂತೆ ನಮ್ಮ ತಾಲ್ಲೂಕಿನ 24 ಇಲಾಖೆಗಳ ಸಿ.ದರ್ಜೆ ನೌಕರರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿ ಕೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್ ಒತ್ತಾಯಿಸಿದರು.

ಈ ನಡುವೆ ಗರ್ಭಿಣಿ, ಬಾಣಂತಿಯರು ಸೇರಿದಂತೆ ಆರೋಗ್ಯದ ಸಮಸ್ಯೆ ಇರುವವರಿಗೆ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಮನವಿಮಾಡಿರು.ಸಮೀಕ್ಷೆ ಕಾರ್ಯದಲ್ಲಿ ಗೊಂದಲ ಗಳಾಗಿರುವುದು ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಭರವಸೆ ನೀಡಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಧನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಜೈಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ ಇದ್ದರು.

ಸುದ್ದಿ ಸಂತೆ ನ್ಯೂಸ್……


Google News

 

 

WhatsApp Group Join Now
Telegram Group Join Now
Suddi Sante Desk