This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಿಕ್ಷಕರ ಪ್ರತಿಭಟನೆ ಆಕ್ರೋಶ – ಸಮಸ್ಯೆ ಆಲಿಸದ ಅಧಿಕಾರಿಗಳು ಪರದಾಡುತ್ತಿದ್ದಾರೆ ಶಿಕ್ಷಕರು…..

ಶಿಕ್ಷಕರ ಪ್ರತಿಭಟನೆ ಆಕ್ರೋಶ – ಸಮಸ್ಯೆ ಆಲಿಸದ ಅಧಿಕಾರಿಗಳು ಪರದಾಡುತ್ತಿದ್ದಾರೆ ಶಿಕ್ಷಕರು…..
WhatsApp Group Join Now
Telegram Group Join Now

ಬೆಂಗಳೂರು

:ಶಿಕ್ಷಕರು ಕೆಲಸ ಮಾಡುವ ಮತಗಟ್ಟೆಗಳಿಗೆ ಅನುಗುಣ ವಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ನಿಯೋಜಿಸ ಬೇಕು. ಅಲ್ಲಿಯವರೆಗೂ ತಪ್ಪಾಗಿ ನಿಯೋಜಿಸಿರುವ ಪ್ರದೇಶಗಳಲ್ಲಿ ಸಮೀಕ್ಷೆ ಆರಂಭಿಸುವುದಿಲ್ಲ ಎಂದು ಶಿಕ್ಷಕರು ಪಟ್ಟು ಹಿಡಿದ್ದಾರೆ.ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಸಮೀಕ್ಷಕರಾಗಿ ಸರ್ಕಾರಿ ಶಾಲೆಯ ಶಿಕ್ಷಕರನ್ನು ಕರ್ತವ್ಯ ನಿರ್ವಹಿಸುವ ಸ್ಥಳವನ್ನು ಬಿಟ್ಟು ಬೇರೆ ಪಂಚಾಯಿತಿ ವ್ಯಾಪ್ತಿಗೆ ನೇಮಿಸಿರುವುದು ಸಂಪೂರ್ಣ ಅವೈಜ್ಞಾನಿ ಎಂದು ಆರೋಪಿಸಿ ಪಟ್ಟಣದ ದೇವರಾಜ್‌ ಅರಸು ಭವನದ ಹಿಂದುಳಿದ ವರ್ಗಗಳ ಇಲಾಖೆ ಮುಂಭಾಗ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಿಕ್ಷಕರಿಗೆ ನಿಯೋಜಿಸಿರುವ ಕರ್ತವ್ಯವನ್ನು ಹಿಂಪಡೆಯಬೇಕು. ಅವರ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಮಾತ್ರವೇ ಸಮೀಕ್ಷಕರನ್ನ ನೇಮಿಸಬೇಕು. ಇಲ್ಲದೇ ಇದ್ದರೇ ಶಿಕ್ಷಕರು ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಮುಂಭಾಗ ಪ್ರತಿಭಟಿಸಬೇಕಾಗುತ್ತದೆ ಎಂದು ಸಂಘದ ಆದರ್ಶ ಎಚ್ಚರಿಕೆ ನೀಡಿದರು.

ಶಿಕ್ಷಕರ ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸಮೀಕ್ಷಕರ ಪಟ್ಟಿ ತಯಾರಿಸಲಾಗಿದೆ. ಅಂಗವಿಕಲರು, ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೃತರಾಗಿರುವ ಶಿಕ್ಷಕರನ್ನು ಸಮೀಕ್ಷಕರಾಗಿ ನೇಮಕ ಮಾಡಿರುವುದು ಇದಕ್ಕೆ ನಿದರ್ಶನ. ಅಪಘಾತದಿಂದ ಆಸ್ಪತ್ರೆಯಲ್ಲಿರುವವರು, ಗರ್ಭಿಣಿ ಸ್ತ್ರೀಯರು, ಅಂಗವಿಕಲರು, ಕ್ಯಾನ್ಸರ್‌ ರೋಗದಿಂದ ಬಳಲುತ್ತಿ ರುವವರನ್ನು ಸಮೀಕ್ಷೆ ಕೆಲಸದಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.

ಸಮೀಕ್ಷೆಗಾಗಿ ನೀಡಿರುವ ಮೊಬೈಲ್‌ ತಂತ್ರಾಂಶ ಕೆಲಸ ಮಾಡುತ್ತಿಲ್ಲ. ಸೂಕ್ತ ವ್ಯವಸ್ಥೆ ಕಲ್ಪಿಸದೇ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಿ ಎಂದು ಒತ್ತಡ ಹಾಕಿದರೇ ಹೇಗೆ ಸಾಧ್ಯ? ತಂತ್ರಾಂಶವನ್ನು ದೋಷವನ್ನು ಸರಿಪಡಿಸದ ನಂತರ ಸಮೀಕ್ಷೆ ಕೆಲಸ ಮಾಡುತ್ತೇವೆ. ಅಲ್ಲಿಯವರೆಗೂ ಯಾವ ಶಿಕ್ಷಕರಿಗೂ ಅಧಿಕಾರಿಗಳು ಒತ್ತಡ ಹೇರಬಾ ರದು ಎಂದು ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗೇಶ್‌ ತಿಳಿಸಿದರು.

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗಾಗಿ ರೂಪಿಸಿರುವ ಮೊಬೈಲ್‌ ತಂತ್ರಾಂಶ ದೋಷದಿಂದ ಕೂಡಿದ್ದು, ಕಾರ್ಯನಿರ್ವಹಿಸುತ್ತಿಲ್ಲ ಇದನ್ನು ಸರಿಪಡಿಸುವ ವರೆಗೂ ಸಮೀಕ್ಷೆಯ ಮೇಲ್ವಿಚಾರಕರು ಸಮೀಕ್ಷೆ ಮಾಡುವಂತೆ ಯಾವುದೇ ಪರಿಕರ ನೀಡಿದರು ಶಿಕ್ಷಕರು ಸ್ವೀಕರಿಸುವುದಿಲ್ಲ ಎಂದು ಶಿಕ್ಷಕರ ಸಂಘ ತಿಳಿಸಿದೆ

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk