This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ದೂರದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ವರ್ಷಕ್ಕೊಮ್ಮೆ ಕನಿಷ್ಠ ಬೇಸಿಗೆ ರಜೆ ಅವಧಿಯಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಲು ಸಾಧ್ಯವಾಗುವು ದಿಲ್ಲ ಬೇಸಿಗೆ ರಜೆಯನ್ನು ವಿಸ್ತರಣೆ ಮಾಡಿ ನಾಡಿನ ಶಿಕ್ಷಕರ ಪರವಾಗಿ ಷಡಾಕ್ಷರಿ ಒತ್ತಾಯ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದಲ್ಲಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.ಈ ನಿರ್ಧಾರಕ್ಕೆ ಕೈಬಿಟ್ಟು ಮೇ 30 ರವರೆಗೆ ಬೇಸಿಗೆ ರಜೆ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮನವಿ ಮಾಡಿದ್ದಾರೆ ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಅವರು ಕೂಡ ರಜೆಯನ್ನು ಮೇ 30 ರವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿದ್ದಾರೆ.

ಹೌದು ರಾಜ್ಯದಲ್ಲಿ ಮೇ 16 ರಿಂದ ಶಾಲೆಗಳನ್ನು ಆರಂಭಿ ಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.ಈ ನಿರ್ಧಾ ರವನ್ನು ಕೈಬಿಟ್ಟು ಮೇ 30 ರವರೆಗೆ ಬೇಸಿಗೆ ರಜೆ ವಿಸ್ತರಿಸ ಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮನವಿ ಮಾಡಿದ್ದಾರೆ ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಅವರು ಕೂಡ ರಜೆಯನ್ನು ಮೇ 30 ರವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿದ್ದಾರೆ.ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದಿದ್ದು 15 ದಿನ ಮೊದಲೇ ಶಾಲೆ ಆರಂಭಿ ಸಲು ಮುಂದಾಗಿರುವುದರಿಂದ ದೂರದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ವರ್ಷಕ್ಕೊಮ್ಮೆ ನೀಡುವ ಕನಿಷ್ಠ ರಜೆ,ಬೇಸಿಗೆ ರಜೆ ಅವಧಿಯಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಲು ಸಾಧ್ಯವಾಗುವುದಿಲ್ಲ.ಈ ಬಾರಿ ಬೇಸಿಗೆ ಯಲ್ಲಿ ತಾಪಮಾನ ಹೆಚ್ಚಾಗಿರುವುದರಿಂದ ಬೇಸಿಗೆ ರಜೆ ಯನ್ನು ವಿಸ್ತರಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘ ಮೇ 30 ರವರೆಗೆ ರಜೆ ವಿಸ್ತರಿಸಬೇಕೆಂದು ಪತ್ರ ಬರೆದಿರುವುದಕ್ಕೆ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಆಡಳಿತ ಮಂಡಳಿಗಳ ಸಂಘ,ನೋಂದಾಯಿತ ಅನುದಾ ನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದಿಂ ದ ವಿರೋಧ ವ್ಯಕ್ತವಾಗಿದೆ.ನಿಗದಿಯಂತೆ ಶಾಲೆ ಆರಂಭಿಸ ಬೇಕೆಂಬ ಒತ್ತಾಯ ಕೇಳಿಬಂದಿದೆ.


Google News

 

 

WhatsApp Group Join Now
Telegram Group Join Now
Suddi Sante Desk