This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ರಾಜ್ಯದಲ್ಲಿಂದು ಮರೆಯಾದ ಹತ್ತು ಜನ ಆದರ್ಶ ಶಿಕ್ಷಕರು – ಅಗಲಿದ ಶಿಕ್ಷಕರಿಗೆ ನಾಡಿನ ಮೂಲೆಗಳಿಂದ ಭಾವಪೂರ್ಣ ನಮನ ಶೃದ್ದಾಂಜಲಿ

WhatsApp Group Join Now
Telegram Group Join Now

ಬೆಂಗಳೂರು –

ಕೋವಿಡ್ ಗೆ ರಾಜ್ಯದಲ್ಲಿಂದು ಹತ್ತಕ್ಕೂ ಹೆಚ್ಚು ಶಿಕ್ಷಕರು ಮೃತರಾಗಿದ್ದಾರೆ. ಹೌದು ಚುನಾವಣೆ ಕರ್ತವ್ಯ ಸೇರಿದಂತೆ ವಿವಿಧ ಕರ್ತವ್ಯಗಳಲ್ಲಿ ತೊಡಗದ್ದ ಶಿಕ್ಷಕರಿಗೆ ಕರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆಗಾಗಿ ರಾಜ್ಯದ ವಿವಿದೆಡೆ ದಾಖಲಾಗಿದ್ದ ಹತ್ತಕ್ಕೂ ಹೆಚ್ಚು ಶಿಕ್ಷಕರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಇನ್ನೂ ಮೃತ ಶಿಕ್ಷಕರ ಕುರಿತಂತೆ ಮಾಹಿತಿ ಈ ಕೆಳಗಿನಂತಿದೆ.

ಶ್ರೀಮತಿ ಸರಸ್ವತಿಬಾಯಿ ಕಟ್ಟಿ ಪ್ರಧಾನ ಗುರುಗಳು ಗುಲಬರ್ಗಾ ಜಿಲ್ಲೆಯ ಸೇಡಂ ನಲ್ಲಿ ಕಿರಿಯ ಪ್ರಾಥ ಮಿಕ ಶಾಲೆಯಲ್ಲಿ ಕರ್ತವ್ಯ ಮಾಡುತ್ತಿದ್ದರು.ಇವರು ಇಂದು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಅದೃಶ್ಯ ಕಲ್ಲಪ್ಪ ಕರಮಳ್ಳನವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೆಳಗಾವಿ ಜಿಲ್ಲೆಯ ಖಾನಾಪೂರ ಇವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಸೂರ್ಯಕಾಂತ ದೊಡ್ಡಮನಿ ವಿಜಯಪುರ ಜಿಲ್ಲೆಯ ಇಂಡಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾ ಗಿದ್ದ ಇವರು ಕೂಡಾ ಕೋವಿಡ್ ನಿಂದಾಗಿ ಮೃತರಾ ಗಿದ್ದಾರೆ.

ಪ್ರಕಾಶ್ ಸಹ ಶಿಕಕ್ಷಕರು ಇವರು ಕೂಡಾ ಕೋವಿಡ್ ನಿಂದಾಗಿ ಮೃತರಾಗಿದ್ದಾರೆ. ಬೆಂಗಳೂರಿನ ವಿನಾಯ ಕ ನಗರದ ನಿವಾಸಿಯಾಗಿದ್ದು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಸೋಂಕು ಕಾಣಿಸಿಕೊಂಡು ಆಸ್ಪತ್ರೆ ಗೆ ದಾಖಲಾಗಿದ್ದರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಆದಿನಾರಾಯಣ ಸರ್ಕಾರಿ ಪ್ರೌಢ ಶಾಲೆ ಸೋಮನಾ ಥಪುರ ಇವರು ಕೂಡಾ ಕೋವಿಡ್ ನಿಂದಾಗಿ ಮೃತ ರಾಗಿದ್ದಾರೆ. ಸೋಂಕು ಕಾಣಿಸಿಕೊಂಡು ನಂತರ ಆಸ್ಪ ತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಿಸದೇ ನಿಧನರಾಗಿ ದ್ದಾರೆ.

ಗಂಗಾಧರ ಅಡ್ಡೇರ ಚಿಂತಾಮಣಿಯ ಸಂತೆಕಲ್ಲಹಳ್ಳಿಯ ಸರ್ಕಾರಿ ಶಾಲೆಯ ಇಂಗ್ಲೀಷ್ ಶಿಕ್ಷಕರಾಗಿದ್ದ ಇವರು ಕೂಡಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಸಿದ್ದಪ್ಪಾ ವಡೆಯರ ಹಾರೋಗೇರಿ ಅಂಖಂಡ ಬೆಳಗಾವಿ ಜಿಲ್ಲೆಯ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದು ಇವರು ಕೂಡಾ ಕೋವಿಡ್ ಗೆ ಬಲಿಯಾಗಿದ್ದಾರೆ.

ಬೈಲಹೊಂಗಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಈರಪ್ಪ ಚಪಳಿ ಇವರು ಕೂಡಾ ಕೋವಿಡ್ ಗೆ ನಿಧನರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಇನ್ನೂ ಮೃತರಾದ ರಾಜ್ಯದ ಮೂಲೆ ಮೂಲೆಗಳಲ್ಲಿ ನ ಶಿಕ್ಷಕ ಬಂಧುಗಳಿಗೆ ಶಿಕ್ಷಕ ಬಂಧುಗಳು ಭಾವ ಪೂರ್ಣ ನಮನ ಸಂತಾಪವನ್ನು ಸಲ್ಲಿಸಿದ್ದಾರೆ. ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಸಂತಾಪವನ್ನು ಸಲ್ಲಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk