ಭೀಕರ ಅಪಘಾತ ಹೆಡ್ ಕಾನ್ಸ್‌ಟೇಬಲ್ ಸಾವು ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ ಚಿಕಿತ್ಸೆ ಫಲಸದೇ ಸಾವು…..

Suddi Sante Desk

ಚಿತ್ರದುರ್ಗ –

ರಸ್ತೆ ಅಪಘಾತ ದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ರೊಬ್ಬರು ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ ಹೌದು ತಾಲ್ಲೂಕಿನ ತುರುವನೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಾಂ ತೇಶ್(48)ಮೃತರಾದವರಾಗಿದ್ದಾರೆ.

ಜುಲೈ 16 ರಂದು ರಾಷ್ಟ್ರೀಯ ಹೆದ್ದಾರಿ 50(13) ಮಲ್ಲಾಪುರ ಬಳಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಜೆ.ಎನ್ ಕೋಟೆ ವಾಸಿಯಾದ ಇವರಿಗೆ ಪತ್ನಿ,ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬವರ್ಗದವರನ್ನು ಅಗಲಿ ದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ನಡೆಯಲಿದೆ

ಮಹಾಂತೇಶ್ ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರುಶುರಾಮ ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಹೋದ್ಯೋಗಿಗಳು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ.

ಚಕ್ರವರ್ತಿ ಜೊತೆ ಮಂಜುನಾಥ್ ಸುದ್ದಿ ಸಂತೆ ನ್ಯೂಸ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.