ಭೀಕರ ಅಪಘಾತ ಸರ್ಕಾರಿ ನೌಕರ ಸಾವು – ಬೆಂಗಳೂರು ನಿಂದ ಊರಿಗೆ ಹೊರಟಿದ್ದ ಕಾರಿಗೆ ಲಾರಿ ಡಿಕ್ಕಿ…..

Suddi Sante Desk
ಭೀಕರ ಅಪಘಾತ ಸರ್ಕಾರಿ ನೌಕರ ಸಾವು – ಬೆಂಗಳೂರು ನಿಂದ ಊರಿಗೆ ಹೊರಟಿದ್ದ ಕಾರಿಗೆ ಲಾರಿ ಡಿಕ್ಕಿ…..

ಬೆಳಗಾವಿ

ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತ ಪಟ್ಟಿರುವ ಘಟನೆ ಕಿತ್ತೂರ ಸಮಿಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.ಚಿಕ್ಕೋಡಿ ತಹಶೀಲ್ದಾ‌ರ್ ಕಚೇರಿ ನೌಕರ ಅಮಿತ್ ರಾವ್ ಶಿಂದೆ (35) ಮೃತ ದುರ್ದೈವಿ ಯಾಗಿದ್ದಾರೆ ಬೆಂಗಳೂರಿನಿಂದ ಸ್ವಗ್ರಾಮ ಅಕ್ಕೊಳಗೆ ಹೊರಟಿದ್ದ ವೇಳೆ ಮುಂಜಾನೆ 6 ಗಂಟೆಗೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ 4 ಜನರು ಸಂಚರಿಸುತ್ತಿದ್ದರು. ಅದರಲ್ಲಿ ಓರ್ವ ಮೃತ ಪಟ್ಟಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾ ಗಿವೆ ಎಂದು ಪೋಲಿಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೋಳ ಭೆಟ್ಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.