ಉಡುಪಿ –
ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಉಡುಪಿ ಬಳಿ ನಡೆದಿದೆ.ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿದ್ದಾರೆ.
ಸೀತಾನದಿ ಜಕ್ಕನಮಕ್ಕಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಗಂಭೀರವಾಗಿ ಗಾಯಗೊಂಡ ಶಿಕ್ಷಕರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿ ಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾ ಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು.ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬು ವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಉಡುಪಿ…..