This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರಾಜು ಕೋಟೆನ್ನವರ ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷರಿಗೆ ಧನ್ಯವಾದ ಅರ್ಪಿಸಿ ಆಪ್ತನಿಗೆ ಹರಿಸಿದ ಶಾಸಕ ಅರವಿಂದ ಬೆಲ್ಲದ ಮತ್ತು ಟೀಮ್

WhatsApp Group Join Now
Telegram Group Join Now

ಬೆಂಗಳೂರು –

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾಗಿ ಧಾರವಾಡದ ರಾಜು ಕೋಟೆನ್ನವರ ಅಧಿಕಾರವನ್ನು ವಹಿಸಿಕೊಂಡರು.ಹೌದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಆಪ್ತ ನಾಗಿರುವ ರಾಜು ಕೋಟೆನ್ನವರ ಅವರನ್ನು ಸ್ವತಃ ಶಾಸಕ ಅರವಿಂದ ಬೆಲ್ಲದ ಕರೆದುಕೊಂಡು ಹೋಗಿ ಬೆಂಗಳೂರಿ ನಲ್ಲಿರುವ ಕಚೇರಿಯಲ್ಲಿ ಅಧಿಕಾರ ವಹಿಸಿದರು.

ನಂತರ ಶುಭ ಹಾರೈಸಿ ಒಳ್ಳೇಯ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗುವಂತೆ ಶುಭ ಹಾರೈಸಿದರು. ಶಾಸಕರೊಂದಿಗೆ ಕ್ಷೇತ್ರದಿಂದ ಸಾಕಷ್ಟು ಪ್ರಮಾಣದಲ್ಲಿ ಪಾಲಿಕೆಯ ಸದಸ್ಯರು ಆಪ್ತರು ಪಕ್ಷದ ಮುಖಂಡರು ಸೇರಿದಂತೆ ಹಲವರು ಪಾಲ್ಗೊಂಡು ಈ ಒಂದು ಕಾರ್ಯ ಕ್ರಮಕ್ಕೆ ಸಾಕ್ಷಿಯಾಗಿ ಶುಭ ಹಾರೈಸಿದರು.

ಇನ್ನೂ ಅಧಿಕಾರ ವಹಿಸಿಕೊಂಡ ನಂತರ ರಾಜು ಕೋಟೆ ನ್ನವರ ಅವರನ್ನು ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಧನ್ಯವಾದಗಳನ್ನು ಅರ್ಪಣೆ ಮಾಡಿದರು.

ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ಲಿ.) ಇದರ ನೂತನ ಅಧ್ಯಕ್ಷ ರಾಗಲು ಕಾರಣಾದವರಿಗೆ ಈ ಮೂಲಕ ತುಂಬು ಧನ್ಯವಾ ದಗಳನ್ನು ರಾಜು ಕೋಟೆನ್ನವರ ಮತ್ತು ಶಾಸಕರು ಸಲ್ಲಿಸಿ ದರು.

ಈ ಸಂದರ್ಭದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪ, ಪ್ರಸಾದ ಅಬ್ಬಯ್ಯ,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಮಂಡಲ ಅಧ್ಯಕ್ಷರಾದ ಬಸವ ರಾಜ ಗರಗ,ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk