ಕೇಂದ್ರ ಸರ್ಕಾರ ಆದೇಶ ಹೊರಡಿಸಿದ 24 ಗಂಟೆಯಲ್ಲಿ ರಾಜ್ಯದ ನೌಕರರಿಗೆ ತುಟ್ಟಿ ಭತ್ಯೆ ನೀಡಿದ ರಾಜ್ಯ ಸರ್ಕಾರಕ್ಕೆ KSPSTA ನಿಂದ ಧನ್ಯವಾದಗಳು – CM ಗೆ ವಿಶೇಷ ಪುಸ್ತಕ ನೀಡಿ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ಧನ್ಯವಾದ ಸಲ್ಲಿಸಿದ ಚಂದ್ರಶೇಖರ ನುಗ್ಗಲಿ ಮತ್ತು ಟೀಮ್…..

Suddi Sante Desk
ಕೇಂದ್ರ ಸರ್ಕಾರ ಆದೇಶ ಹೊರಡಿಸಿದ 24 ಗಂಟೆಯಲ್ಲಿ ರಾಜ್ಯದ ನೌಕರರಿಗೆ ತುಟ್ಟಿ ಭತ್ಯೆ ನೀಡಿದ ರಾಜ್ಯ ಸರ್ಕಾರಕ್ಕೆ KSPSTA ನಿಂದ ಧನ್ಯವಾದಗಳು – CM ಗೆ ವಿಶೇಷ ಪುಸ್ತಕ ನೀಡಿ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ಧನ್ಯವಾದ ಸಲ್ಲಿಸಿದ ಚಂದ್ರಶೇಖರ ನುಗ್ಗಲಿ ಮತ್ತು ಟೀಮ್…..

ಬೆಂಗಳೂರು

ತುಟ್ಟಿಭತ್ಯೆ ಹೆಚ್ಚಳ ಮಾಡಿದ ರಾಜ್ಯದ CM,DCM ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿಶೇಷ ಪುಸ್ತಕ ನೀಡಿ ನಾಡ ದರೆ ಗೆ ನಾಡಿನ ಶಿಕ್ಷಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಹಲಿ

ಹೌದು ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ಇತ್ತ ರಾಜ್ಯ ಸರ್ಕಾರವು ಕೂಡಾ ತನ್ನ ನೌಕರರಿಗೆ ತುಟ್ಟಿಭತ್ಯೆ ಯನ್ನು ಶೇ. 3.75 ಹೆಚ್ಚಿಸಿ ಆದೇಶ ಹೊರಡಿಸಿದೆ ಈ ಒಂದು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧನ್ಯವಾದ ಸಲ್ಲಿಸಿದೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸುದ್ದಿ ಸಂತೆ ಯೊಂದಿಗೆ ಮಾತನಾಡಿ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಘೋಷಣೆ ಮಾಡಿದ 24 ಗಂಟೆಗಳಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಶೇ. 3.75 ತುಟ್ಟಿಭತ್ಯೆ ಹೆಚ್ಚಳ ಮಾಡುವ ಮೂಲಕ ಸಮಸ್ತ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.