This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

PSI ಮರು ಪರೀಕ್ಷೆಗೆ ದಿನಾಂಕ ಘೋಷಣೆ – ಈ ಬಾರಿಯಾದರೂ ಹಾಗೇ ಆಗದೇ ಅಕ್ರಮವಾಗದಿರಲಿ…..

PSI ಮರು ಪರೀಕ್ಷೆಗೆ ದಿನಾಂಕ ಘೋಷಣೆ – ಈ ಬಾರಿಯಾದರೂ ಹಾಗೇ ಆಗದೇ ಅಕ್ರಮವಾಗದಿರಲಿ…..
WhatsApp Group Join Now
Telegram Group Join Now

ಪಿಎಸ್‌ಐ ಹಗರಣ 545 ಹುದ್ದೆಗಳಿಗೆ ಡಿಸೆಂಬರ್ 23ರಂದು ಮರು ಪರೀಕ್ಷೆ ನಡೆಸಲಿರುವ ಕೆಇಎ ಹೌದು ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯಕ್ಕೆ ಆದೇಶ ನೀಡಿದ ಕೆಲವು ದಿನಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಡಿಸೆಂಬರ್ 23ರಂದು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ಮರು ಪರೀಕ್ಷೆಗೆ ದಿನಾಂಕವನ್ನು ಘೋಷಿಸಿದೆ.

ರಾಜ್ಯದಲ್ಲಿ ಖಾಲಿ ಇರುವ 545 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳು ನಡೆಯಲಿವೆ.ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದ ಎಲ್ಲಾ ಅಭ್ಯರ್ಥಿಗಳು ಡಿಸೆಂಬರ್ 23ರಂದು ನಿಗದಿಯಾಗಿರುವ ಪ್ರವೇಶ ಪರೀಕ್ಷೆಯನ್ನು ಪುನಃ ಬರೆಯಬಹುದು ಎಂದು ಕೆಇಎ ಕಾರ್ಯನಿರ್ವಾ ಹಕ ನಿರ್ದೇಶಕಿ ರಮ್ಯಾ ಎಸ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಅಕ್ಟೋಬರ್ 2021ರಲ್ಲಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಿತು. ಫಲಿತಾಂಶಗಳನ್ನು ಜನವರಿ 2022ರಲ್ಲಿ ಘೋಷಿ ಸಲಾಯಿತು.ಅದರ ನಂತರ ಹಲವಾರು ಅಕ್ರಮ ಗಳು ವರದಿಯಾಗಿವೆ ಮತ್ತು ಅದರ ಆಧಾರದ ಮೇಲೆ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ.

ಅಂದಿನ ಬಿಜೆಪಿ ಸರಕಾರ ಒತ್ತಡಕ್ಕೆ ಮಣಿದು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿತ್ತು. ತನಿಖೆಯ ಸಮ ಯದಲ್ಲಿ,ಸಿಐಡಿ ನೇಮಕಾತಿಯ ಮುಖ್ಯಸ್ಥರಾ ಗಿದ್ದ ಅಂದಿನ ಹೆಚ್ಚುವರಿ ಪೊಲೀಸ್ ಮಹಾನಿ ರ್ದೇಶಕ ಅಮೃತ್ ಪಾಲ್ ಸೇರಿದಂತೆ 100ಕ್ಕೂ ಹೆಚ್ಚು ಜನರನ್ನು ಬಂಧಿಸಿತು.

ಪಿಎಸ್‌ಐ ಹುದ್ದೆಗಳ ಪ್ರವೇಶ ಪರೀಕ್ಷೆಯನ್ನು ಅಕ್ರಮವಾಗಿ ತೇರ್ಗಡೆ ಮಾಡಲು ಅಭ್ಯರ್ಥಿಗಳು ಮಧ್ಯವರ್ತಿಗಳಿಗೆ 30-85 ಲಕ್ಷ ರೂ. ನೀಡಿದ್ದರು. ಕಲಬುರಗಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಅಭ್ಯರ್ಥಿಗಳಿಗೆ ನಕಲು ಮಾಡಲು ಪರೀಕ್ಷಾ ಕೇಂದ್ರದ ಮಾಲೀಕರು ಅವಕಾಶ ನೀಡಿದ್ದರು.
ಕಾಂಗ್ರೆಸ್ ನೇತೃತ್ವದ ಸರ್ಕಾರವು ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಹೈಕೋರ್ಟ್ ಮಾಜಿ ನ್ಯಾಯಾಧೀಶ ವೀರಪ್ಪ ನೇತೃತ್ವದ ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ಆದೇಶ ನೀಡಿತು.

ಪಿಎಸ್ ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು ಆದರೆ, ಪರೀಕ್ಷೆ ಯಲ್ಲಿ ಉತ್ತೀರ್ಣರಾದ ಹಲವಾರು ವಿದ್ಯಾರ್ಥಿ ಗಳು ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್‌ ಗೆ ಮೊರೆ ಹೋಗಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನವೆಂಬರ್ 10ರಂದು ಸರ್ಕಾರಿ ಆದೇಶವನ್ನು ಎತ್ತಿಹಿಡಿದಿದೆ ಮತ್ತು ಸ್ವತಂತ್ರ ಸಂಸ್ಥೆಯ ಮೂಲಕ ಮರು ಪರೀಕ್ಷೆ ನಡೆಸುವಂತೆ ರಾಜ್ಯಕ್ಕೆ ನಿರ್ದೇಶಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk