ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.ಹೌದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಮುಂಬಡ್ತಿ ನೀಡುವ ಕುರಿತು ಮಹತ್ವದ ನಿರ್ಣಯಗಳನ್ನು ತಗೆದುಕೊಂಡು ಅನುಕೂಲ ಕಲ್ಪಿಸಲಾಯಿತು
ಪ್ರಮುಖವಾಗಿ ಹುದ್ದೆ ಆಧಾರಿತ ರೀತಿಯಲ್ಲಿ ಮುಂಬಡ್ತಿ ನೀಡುವ ಬಗ್ಗೆ ಹಾಗೇ ಇನ್ನೂ ಕೆಲವೊಂದಿಷ್ಟು ಮಹತ್ವದ ನಿರ್ಣಯಗಳನ್ನು ರಾಜ್ಯ ಸರ್ಕಾರಿ ನೌಕರರ ಪರವಾಗಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು ಇನ್ನೂ ಈ ಒಂದು ನಿರ್ಣಯಗಳನ್ನು ತಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು ಸಚಿವ ಸಂಪುಟದ ಸರ್ವ ಸದಸ್ಯರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.