ನವದೆಹಲಿ –
ಕೇಂದ್ರದಲ್ಲಿ ಸಚಿವ ಸ್ಥಾನದೊಂದಿಗೆ HDK ಗೆ ಮತ್ತೊಂದು ಮಹತ್ವದ ಸ್ಥಾನ – ಮತ್ತೊಂದು ಮಹತ್ವದ ಸ್ಥಾನವನ್ನು ನೀಡಿ ಜವಾಬ್ದಾರಿ ನೀಡಿದ ಕೇಂದ್ರ ಸರ್ಕಾರ ಹೌದು
ಮಾಜಿ ಮುಖ್ಯಮಂತ್ರಿ ಸಧ್ಯ ಕೇಂದ್ರ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿಯ ವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.ಹೌದು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಎಚ್.ಡಿ.ಕುಮಾರಸ್ವಾ ಮಿಯವರಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿಯವರು ಸ್ಥಾನ ಪಡೆದಿದ್ದಾರೆ.ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ,ಹಣಕಾಸು ಸಚಿವೆ ನಿರ್ಮಲಾ ಸೀತಾರಾ ಮನ್, ವಿದೇಶಾಂಗ ಸಚಿವ ಜೈ ಶಂಕರ್,
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾ ಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಇದ್ದಾರೆ.
ಭದ್ರತೆ,ಆರ್ಥಿಕ ಮತ್ತು ರಾಜಕೀಯ ವ್ಯವಹಾರ ಗಳ ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಎಂಟು ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ರಚನೆ ಮಾಡಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..