ಬೆಂಗಳೂರು –
ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಹಿನ್ನಲೆ ಯಲ್ಲಿ ಚಿಕ್ಕಬಳ್ಳಾಪುರ ದಲ್ಲಿ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮ ವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಹೌದು ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿ ಘೋಷಣೆ ಮಾಡಿದ್ದಾರೆ
ಬುಧವಾರ ಮಧ್ಯರಾತ್ರಿ ನಗರದ ಆರ್ ಟಿ ನಗರದ ನಿವಾಸದ ಬಳಿ ತುರ್ತು ಸುದ್ದಿಗೋಷ್ಠಿ ಕರೆದ ಸಿಎಂ ಈ ವಿಷಯ ಪ್ರಕಟಿಸಿದರು
ಒಬ್ಬ ಅತ್ಯಂತ ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾ ಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ ಖಂಡನೀಯ.ಮಾತುಗಳಲ್ಲಲ್ಲ ಮನಸ್ಸಲ್ಲೂ ಆಕ್ರೋಶವಿದೆ. ಹರ್ಷ ಕೊಲೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ಆಗಿರುವುದು ಮನಸಿಗೆ ಘಾಸಿ ಮಾಡಿದೆ ರಾಜ್ಯಾಧ್ಯಕ್ಷರು ಪ್ರವೀಣ್ ಮನೆಗೆ ತೆರಳಿ ಮನೆಯವರಿಗೆ ಸಮಾಧಾನ ಹೇಳಿದ್ದಾರೆ ಎಂದು ಸಿಎಂ ವಿವರಿಸಿದರು.
ಒಂದು ಕಡೆ ಕಾರ್ಯಕರ್ತನ ಕೊಲೆಯಾಗಿದೆ.ಇನ್ನೊಂದೆಡೆ ನನ್ನ ಸರ್ಕಾರಕ್ಕೆ ನಾಳೆ ಒಂದು ವರ್ಷ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಜನೋತ್ಸವ ನಡೆಸಲಿದ್ದುದರ ಉದ್ದೇಶ ಜನಪರವಾಗಿ ಏನು ಕೆಲಸ ಮಾಡಿದ್ದೇವೆ ಅದನ್ನು ಜನತೆಗೆ ತಿಳಿಸುವುದಾಗಿತ್ತು. ಆದರೆ ಈ ಸಂದರ್ಭದಲ್ಲಿ ಜನೋತ್ಸವ ನಡೆಸದಿರಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.