ಶಾಲಾ ಕಾಲೇಜು ಆರಂಭ ಕುರಿತು ಮುಖ್ಯಮಂತ್ರಿ ಮಾಹಿತಿ ಶಾಂತಿ ಕದಡಿದರೆ ಅಂಥವರ ಮೇಲೆ ಸೂಕ್ತ ಕ್ರಮದ ಎಚ್ಚರಿಕೆ…..

Suddi Sante Desk

ಹುಬ್ಬಳ್ಳಿ ಧಾರವಾಡ –

ನಾಳೆಯಿಂದ ರಾಜ್ಯದಲ್ಲಿ ಪ್ರೌಡ ಶಾಲೆಗಳನ್ನು ಆರಂಭಿಸು ತ್ತಿದ್ದೇವೆ ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಶಾಲಾ ಆಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿ ದ್ದೇನೆ ನಾಳೆ ಶಾಂತಿಯುತ ಎಲ್ಲಾ ತರಗತಿಗಳು ನಡೆಯು ತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇದನ್ನ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿ ಸುತ್ತೇವೆ ಎಂದರು.

ಮೊದಲಿನ ಹಾಗೇ ಸೌರ್ಹದಯುತವಾಗಿ ಶಾಲಾ ಕಾಲೇಜು ಗಳನ್ನ ಆರಂಭಿಸುತ್ತೆವೆ.ಶಾಲಾ ಕಾಲೇಜುಗಳನ್ನು ಆರಂಭಿ ಸೋದು ನಮ್ಮ‌ ಮೊದಲ ಆಧ್ಯತೆಯಾಗಿದೆ.ಯಾರು ಪ್ರಚೋದನೆ ನೀಡ್ತಾರೆ,ಸೋಷಿಯಲ್ ಮೀಡಿಯಾದಲ್ಲಿ ಸಂದೇಶವನ್ನ ಹಾಕ್ತಾರೆ.ಅವೆಲ್ಲವನ್ನೂ ನಮ್ಮ ಅಧಿಕಾರಿ ಗಳು ಗಮನಿಸುತ್ತಾರೆ ಎಂದರು.

ಇನ್ನೂ ರಾಜ್ಯ ಬಜೆಟ್ ಮಂಡನೆ ವಿಚಾರ ಕುರಿತು ಮಾತನಾಡಿ ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ.ಈ ಬಜೆಟ್ ನಲ್ಲಿ ಅದಕ್ಕೆ ಬೂಸ್ಟ್ ಕೊಡೋ ಪ್ರಯತ್ನ ಮಾಡುತ್ತೇವೆ.ಸಮಗ್ರ ಕರ್ನಾಟಕದ ಅಭಿವೃದ್ದಿ ಚಿಂತನೆ ಇದೆ ಎಂದರು.ಇನ್ನೂ ಆರ್ಥಿಕ‌ ಅಭಿವೃದ್ದಿ,ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.