ಸರ್ಕಾರಿ ನೌಕರರು ಅಧಿಕಾರಿಗಳಿಗೆ ಶಾಕ್ ನೀಡಿದ CM – ಪ್ರಭಾವ ಬಳಸಿ ಬೇರೆ ಇಲಾಖೆ ಗಳಿಗೆ ಹೋಗುವವರಿಗೆ ಕಠಿಣ ದಾರಿ ಮಾಡಿದ ಮುಖ್ಯಮಂತ್ರಿ

Suddi Sante Desk
ಸರ್ಕಾರಿ ನೌಕರರು ಅಧಿಕಾರಿಗಳಿಗೆ ಶಾಕ್ ನೀಡಿದ CM – ಪ್ರಭಾವ ಬಳಸಿ ಬೇರೆ ಇಲಾಖೆ ಗಳಿಗೆ ಹೋಗುವವರಿಗೆ ಕಠಿಣ ದಾರಿ ಮಾಡಿದ ಮುಖ್ಯಮಂತ್ರಿ

ಬೆಳಗಾವಿ

ಸರ್ಕಾರಿ ನೌಕರರು ಅಧಿಕಾರಿಗಳಿಗೆ ಶಾಕ್ ನೀಡಿದ CM – ಪ್ರಭಾವ ಬಳಸಿ ಬೇರೆ ಇಲಾಖೆ ಗಳಿಗೆ ಹೋಗುವವರಿಗೆ ಕಠಿಣ ದಾರಿ ಮಾಡಿದ ಮುಖ್ಯಮಂತ್ರಿ ಹೌದು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರನ್ನು ಅನ್ಯ ಇಲಾಖೆಗಳಿಗೆ ನಿಯೋ ಜಿಸುವ ಸರ್ಕಾರದ ಕ್ರಮವನ್ನು ಅಧಿಕಾರಿ ಹಾಗೂ ನೌಕರರು ಪ್ರಭಾವ ಬಳಸಿ ಅನಗತ್ಯವಾಗಿ ಇತರೆ ಇಲಾಖೆಗಳಿಗೆ ನಿಯೋಜನೆಗೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ನಿಯೋಜನೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಸಿಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನ ಪರಿಷತ್‍ನಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದರು. ಸರ್ಕಾರಿ ನೌಕರರು ನಿಯೋಜನೆ ಮೇರೆಗೆ ಅನ್ಯ ಇಲಾಖೆ ತೆರಳ ವುದರಿಂದ ಅನೇಕ ತೊಂದರೆಗಳು ಎದುರಾ ಗುತ್ತವೆ. ನಿಯಮಗಳಲ್ಲಿನ ಸಡಿಲತೆಯನ್ನು ಬಳಸಿಕೊಂಡು ಅಧಿಕಾರಿಗಳು ಅನಗತ್ಯವಾಗಿ ಹೆಚ್ಚು ದಿನಗಳ ಕಾಲ ಅನ್ಯ ಇಲಾಖೆಯಲ್ಲಿ ನಿಯೋಜನೆ ಮೇರಗೆ ಮುಂದುವರಿಯುತ್ತಾರೆ.

ಇದರಿಂದ ನಿಯೋಜನೆಗೊಂಡ ಇಲಾಖೆ ಮುಂಬಡ್ತಿಯಲ್ಲೂ ತೊಂದರೆಯಾಗುತ್ತದೆ. ಹೀಗಾಗಿ ಕಠಿಣ ನಿಯೋಜನೆ ನಿಯಮಗಳಲ್ಲಿ ಜಾರಿಗೆ ತರುವುದು ಅಗತ್ಯವಾಗಿದೆ ಎಂದರು

ಗ್ರಾ,ಮೀಣಾಭಿವೃದ್ಧಿ ಇಲಾಖೆಯಲ್ಲಿ ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತಿದ್ದ ಪಶುವೈಧ್ಯಾಧಿಕಾರಿಗಳನ್ನು ಮಾತೃ ಇಲಾಖೆ ಕಳುಹಿಸಲಾಗಿದೆ.ತಾಂತ್ರಿಕ ಹುದ್ದೆಗಳಲ್ಲಿ ನೇಮಕಗೊಂಡು ಆಡಳಿತಾತ್ಮಕ ಹುದ್ದೆಗಳಿಗೆ ಅಧಿಕಾರಿಗಳು ನಿಯೋಜನೆ ಮೇರಿಗೆ ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸ ಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.