This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ರಾಜ್ಯದ ಸರ್ಕಾರಿ ನೌಕರರಿಗೆ, ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ CM – ಚುನಾವಣೆಯ ಹೊಸ್ತಿಲಲ್ಲಿ ಬ್ರೇಕ್ ಹಾಕಿ ಆತಂಕವನ್ನು ತಂದಿಟ್ಟ ಮುಖ್ಯಮಂತ್ರಿ

ರಾಜ್ಯದ ಸರ್ಕಾರಿ ನೌಕರರಿಗೆ, ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ CM – ಚುನಾವಣೆಯ ಹೊಸ್ತಿಲಲ್ಲಿ ಬ್ರೇಕ್ ಹಾಕಿ ಆತಂಕವನ್ನು ತಂದಿಟ್ಟ ಮುಖ್ಯಮಂತ್ರಿ
WhatsApp Group Join Now
Telegram Group Join Now

ಬೆಂಗಳೂರು

ಹೌದು ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ನಾಯಿ ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರಿಗೆ ಬಿಗ್ ಶಾಕ್ ನೀಡಿದ್ದಾರೆ.ವರ್ಗಾವಣೆ ಹಾಗೂ ನಿಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆಯೊಡ್ಡಿದ್ದಾರೆ. ಬಜೆಟ್ ಅಧಿವೇಶನ ಹಾಗೂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಹಾಗೂ ನಿಯೋಜನೆಗೆ ಅವಕಾಶ ವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರದ ಯಾವುದೇ ಅಧಿಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಿ ಸಿದ ಪ್ರಸ್ತಾವನೆಗಳನ್ನು ತಮಗೆ ಸಲ್ಲಿಸದಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.ಈಗಾಗಲೇ ವರ್ಗಾವಣೆ ಅವ ಮುಗಿದಿರುವುದರಿಂದ ಹಾಗೂ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆ,ನಿಯೋಜನೆ ಪ್ರಸ್ತಾವ ಸಲ್ಲಿಸಬಾ ರದು.

ಒಂದು ವೇಳೆ ಸ್ಥಳ ನಿರೀಕ್ಷಣೆಯಲ್ಲಿರುವವರಿಗೆ ಖಾಲಿ ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಪ್ರಸ್ತಾವನೆಗಳನ್ನು ಸಚಿವರ ಹಂತದಲ್ಲಿಯೇ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ.ಈ ಸಂಬಂಧ ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

ವರ್ಗಾವಣೆ ಅವದಿ ಮುಗಿದ ಬಳಿಕ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯಬೇಕಿದೆ ಎಂಬ ಸೂಚನೆ ಯನ್ನು ನೀಡಿ ದ್ದಾರೆ ಇದರೊಂದಿಗೆ ಮುಖ್ಯಮಂತ್ರಿ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 


Google News

 

 

WhatsApp Group Join Now
Telegram Group Join Now
Suddi Sante Desk