ವಿಮಾನದಲ್ಲಿ ಪ್ರವಾಸಕ್ಕೆ ಹೊರಟ ರಾಜ್ಯದ ಮತ್ತೊಂದು ಸರ್ಕಾರಿ ಶಾಲೆಯ ಮಕ್ಕಳು – ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟ ರಾಜ್ಯದ ಎರಡನೇಯ ಶಾಲಾ ಮಕ್ಕಳು…..

Suddi Sante Desk
ವಿಮಾನದಲ್ಲಿ ಪ್ರವಾಸಕ್ಕೆ ಹೊರಟ ರಾಜ್ಯದ ಮತ್ತೊಂದು ಸರ್ಕಾರಿ ಶಾಲೆಯ ಮಕ್ಕಳು – ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟ ರಾಜ್ಯದ ಎರಡನೇಯ ಶಾಲಾ ಮಕ್ಕಳು…..

ಕೊಪ್ಪಳ

ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ ಹೌದು ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ದಲ್ಲಿ ಪ್ರವಾಸ ಮಾಡಬೇಕು ಎಂದೆನ್ನುವ ಆಸೆ ಯಾರಿಗೆ ಇರಲ್ಲ ಹೇಳಿ ಎಲ್ಲರೂ ನಾವು ವಿಮಾನ ಹತ್ತಬೇಕು ಎನ್ನುವ ಆಸೆ ಇರುತ್ತೆ ಅಂಥ ಮಕ್ಕಳ ಆಸೆಯನ್ನು ಕೊಪ್ಪಳ ತಾಲೂಕು ಲಿಂಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪೂರೈಸಲು ಮುಂದಾಗಿದೆ.
ಡಿ.06 ರಂದು ಈ ಒಂದು ಶಾಲೆಯ 30 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಮಾಡಿಸಲು ಸಜ್ಜಾಗಿದೆ.

ಹೌದು ತಾಲೂಕಿನ ಲಿಂಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಇಂತಹ ಹೊಸ ಪ್ರಯತ್ನಕ್ಕೆ ಮುಂದಾಗಿ ಸರ್ಕಾರಿ ಶಾಲೆ ಮಕ್ಕಳೂ ಯಾರಿಗೂ ಕಡಿಮೆ ಇಲ್ಲ ಎಂಬ ಸಂದೇಶ ಕೊಟ್ಟಿದೆ ಅಲ್ಲದೇ ರಾಜ್ಯದಲ್ಲಿಯೇ ಸರ್ಕಾರಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸ ಕೈಗೊಂಡಿರುವ 2ನೇ ಶಾಲೆ ಇದಾಗಲಿದೆ.

ಲಿಂಗದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪ್ರತಿ ವರ್ಷವೂ ಖಾಸಗಿ ಅಥವಾ ಸರ್ಕಾರಿ ಬಸ್‌ಗಳಲ್ಲಿ ರಾಜ್ಯದ ಪ್ರತಿಷ್ಠತ ಪ್ರ ವಾಸಿ ತಾಣಗಳ ವೀಕ್ಷಣೆ ಶೈಕ್ಷಣಿಕ ಪ್ರವಾಸ ಮಾಡುತ್ತದೆ. ಆದರೆ ಈ ಬಾರಿ ವಿಮಾನದಲ್ಲಿ ಪ್ರವಾಸ ಮಾಡುವ ಹೊಸ ಪ್ರಯತ್ನಕ್ಕೆ ಮುಂದಾಗಿ ಮಕ್ಕಳ ಗಗನಯಾನಕ್ಕೆ ಡಿ.06 ರಂದು ಸಜ್ಜಾಗಿದೆ.

ಲಿಂಗದಳ್ಳಿ ಶಾಲೆಯಲ್ಲಿ ಈ ಬಾರಿ ಶೈಕ್ಷಣಿಕ ಪ್ರವಾಸ ಮಾಡೋಣ ಎಂದು ಶಾಲೆ ಶಿಕ್ಷಕ ಮಂಜುನಾಥ ಪೂಜಾರ ಸೇರಿ ಮುಖ್ಯ ಶಿಕ್ಷಕರು ನಿರ್ಧರಿಸಿದ್ದರು. ಆದರೆ ಪ್ರತಿ ವರ್ಷದಂತೆ ಬಸ್‌ನಲ್ಲಿ ಪ್ರವಾಸ ಮಾಡದೇ ಶಾಲೆ
ಮಕ್ಕಳಿಗೆ ವಿಮಾನಯಾನ ಪ್ರವಾಸ ಮಾಡಿಸೋಣ ಎಂದು ನಿರ್ಧಾರ ಮಾಡಿ ಮೊದಲು ಶಾಲೆ ಪಾಲಕರ ಸಭೆ ನಡೆಸಿ ಈ ವಿಷಯ ಪ್ರಸ್ತಾಪ ಮಾಡಿದ್ದಾರೆ.ಇದಕ್ಕೆ ಪಾಲಕರೂ ಸಹ ಸಮ್ಮತಿ ನೀಡಿ ನಾವು ವಿಮಾನ ಪ್ರವಾಸ ಮಾಡಿಲ್ಲ. ಕನಿಷ್ಟ ನಮ್ಮ ಮಕ್ಕಳಾದರೂ ವಿಮಾನ ಹತ್ತಿ ಬರಲಿ ಎಂದು ಪ್ರೋತ್ಸಾಹ ನೀಡಿದ್ದಾರೆ.

ಪಾಲಕರ ಸಹಕಾರ ಸಿಕ್ಕ ಬಳಿಕ ಆಸಕ್ತ ವಿದ್ಯಾರ್ಥಿಗಳ ಪಟ್ಟಿ ಮಾಡಿದ್ದಾರೆ. ಅಂತಿಮವಾಗಿ 5,6 ಹಾಗೂ 7ನೇ ತರಗತಿಯ ಒಟ್ಟು 30 ವಿದ್ಯಾರ್ಥಿಗಳು ವಿಮಾನಯಾನ ಪ್ರವಾಸಕ್ಕೆ ಒಪ್ಪಿಗೆ ಸೂಚಿಸಿದ್ದು ಡಿ.06 ರಂದು ಜಿಂದಾಲ್‌ ನಿಂದ ಹೈದರಾಬಾದ ತನಕ ಒಂದೂವರೆ ಗಂಟೆಗಳ ಕಾಲ ವಿಮಾನದಲ್ಲಿ ಪ್ರವಾಸ ಭಾಗ್ಯವನ್ನು ಪಡೆದಿದ್ದಾರೆ.

ಉಡಾನ್‌ ಯೋಜನೆಯಡಿ ರಿಯಾಯತಿ ಪ್ರಸ್ತುತ ಸಾಮಾನ್ಯ ವ್ಯಕ್ತಿಗಳು ಜಿಂದಾಲ್‌-ಹೈದ್ರಾಬಾದ್‌ಗೆ ವಿಮಾನದಲ್ಲಿ ಪ್ರವಾಸ ಮಾಡಬೇಕೆಂದರೆ ವಿಮಾನದಲ್ಲಿ ಓರ್ವ ವ್ಯಕ್ತಿಗೆ 5-6 ಸಾವಿರ ರೂ.ಟಿಕೆಟ್‌ ದರವಿದೆ. ಆದರೆ ಇದನ್ನು ಮೊದಲೇ ಪ್ಲಾನ್‌ ಮಾಡಿದ್ದ ಶಾಲೆ ಶಿಕ್ಷಕರು ಅಕ್ಟೋಬರ್‌ನಲ್ಲಿ ಜಿಂದಾಲ್‌ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದಾರೆ.

ಅವರಿಗೆ ಉಡಾನ್‌ ಯೋಜನೆಯಡಿ ಶಾಲಾ ಮಕ್ಕಳಿಗೆ ಶೇ.50ರ ರಿಯಾಯತಿಯಲ್ಲಿ ಪ್ರವಾಸ ಮಾಡುವ ಮಾಹಿತಿ ದೊರೆತಿದೆ. ಇದರಿಂದ ಪ್ರತಿ ವಿದ್ಯಾರ್ಥಿಗಳಿಗೆ 2500 ರೂ. ಶುಲ್ಕ ನಿಗದಿ ಮಾಡಿದ್ದಾರೆ.ವಿದ್ಯಾರ್ಥಿಗಳ ಈ ಒಂದು ಪ್ರವಾಸಕ್ಕೆ ಗ್ರಾಪಂ, ಕಂಪನಿ ಸಾಥ್‌ ನೀಡಿದ್ದು ಪ್ರತಿ ವಿದ್ಯಾರ್ಥಿಯು ಮೂರು ದಿನದ ಪ್ರವಾಸಕ್ಕೆ 2500 ರೂ ನಿಗದಿಯಾಾಗಿದೆ.

ಮಕ್ಕಳಿಗೆ ಹೊರೆಯಾಗದಿರಲಿ ಎಂದು ನಿರ್ಧರಿಸಿ ಶಾಲೆಯ 6 ಶಿಕ್ಷಕರು ಹೆಚ್ಚುವರಿ ವೆಚ್ಚ ಭರಿಸುವ ಜೊತೆಗೆ ಬೇವಿನಹಳ್ಳಿ ಗ್ರಾಪಂ, ಸ್ಥಳೀಯ ಕಿರ್ಲೋಸ್ಕರ್‌ ಕಂಪನಿ, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಕೆಲವು ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆ ಮಕ್ಕಳು ವಿಮಾನ ದಲ್ಲಿ ಪ್ರವಾಸ ಮಾಡಲು ಸಹಕಾರ ನೀಡಿದ್ದಾರೆ. ಇದರಿಂದ ಮಕ್ಕಳಿಗೆ ಹೊರೆಯಾಗದಂತೆ ಶಾಲೆಯು ಸಹ ಸಕಲ ವ್ಯವಸ್ಥೆಯನ್ನೂ ಮಾಡಿಕೊಂಡಿದೆ.

ಶಾಲೆ ಮಕ್ಕಳು ಲಿಂಗದಳ್ಳಿಯಿಂದ ಡಿ.06 ರಂದು ತೋರಣಗಲ್‌ ಜಿಂದಾಲ್‌ಗೆ ತೆರಳಲಿದ್ದಾರೆ.ಮಧ್ಯಾಹ್ನ 12 ಗಂಟೆಗೆ ಜಿಂದಾಲ್‌ನಿಂದ ಹೈದ್ರಾಬಾದ್‌ಗೆ ವಿಮಾನ ದಲ್ಲಿ ಒಂದೂವರೆ ಗಂಟೆ ಪ್ರಯಾಣ ಮಾಡಲಿದ್ದಾರೆ. ಹೈದ್ರಾಬಾದ್‌ನಲ್ಲಿ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆ ಮಾಡಲಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ನಂತರ ಅಲ್ಲಿಂದ ರೈಲಿನ ಸ್ಲೀಪರ್‌ ಕೋಚ್‌ನ ಮೂಲಕ ವಿಜಯ ಪುರಕ್ಕೆ ಆಗಮಿಸಿ ವಿವಿಧ ತಾಣ ಭೇಟಿ ಕೊಡಲಿದ್ದಾರೆ. ಅಲ್ಲಿಂದ ಆಲಮಟ್ಟಿಗೆ ಟಿಟಿ ವಾಹನದಲ್ಲಿ ಪ್ರವಾಸ ಮಾಡಿ ನಂತರ ಆಲಮಟ್ಟಿಯಿಂದ ಡಿ.09ಕ್ಕೆ ಕೊಪ್ಪಳಕ್ಕೆ ರಾತ್ರಿ ಆಗಮಿಸಲಿದ್ದಾರೆ.

ಸರ್ಕಾರಿ ಶಾಲೆಯ 30 ವಿದ್ಯಾರ್ಥಿಗಳ ಜೊತೆಗೆ 6 ಜನ ಶಿಕ್ಷಕರು, 6 ಜನ ಎಸ್‌ಡಿಎಂಸಿ ಪ್ರತಿನಿಧಿಗಳು ವಿಮಾನ ದಲ್ಲಿ ಪ್ರವಾಸ ಮಾಡಲಿದ್ದಾರೆ. ಒಟ್ಟು 42 ಸೀಟ್‌ ಗಳನ್ನು ಈಗಾಗಲೇ ಬುಕ್‌ ಮಾಡಿದ್ದು ವಿಮಾನಯಾನ ಶೈಕ್ಷಣಿಕ ಪ್ರವಾಸಕ್ಕೆ ಇಲಾಖೆಯಿಂದಲೂ ಅನುಮತಿ ಪಡೆದು ಪ್ರವಾಸಕ್ಕೆ ಶಾಲೆಯು ಸಜ್ಜಾಗಿದೆ. ಈ ಹಿಂದೆ ಬೆಳಗಾವಿ ಯ ಶಿಕ್ಷಕನೋರ್ವ ನಿವೃತ್ತಿ ಬಳಿಕ ಸರ್ಕಾರಿ ಶಾಲೆ ಮಕ್ಕಳನ್ನು ವಿಮಾನದಲ್ಲಿ ಪ್ರವಾಸ ಮಾಡಿಸಿದ್ದರು.ಈಗ ಲಿಂಗದಳ್ಳಿ ಶಾಲೆ ವಿಮಾನದಲ್ಲಿ ಪ್ರವಾಸ ಮಾಡಿಸುತ್ತಿ ರುವ ರಾಜ್ಯದ 2ನೇ ಶಾಲೆಯಾಗಲಿದೆ.

ಸುದ್ದಿ ಸಂತೆ ನ್ಯೂಸ್ ಕೊಪ್ಪಳ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.