ಮಾರ್ಚ್ 1 ರ ಸರ್ಕಾರಿ ನೌಕರರ ಹೋರಾಟಕ್ಕೆ ರಾಜ್ಯದಲ್ಲಿ ಜೋರಾಗುತ್ತಿದೆ ಕೂಗು – ಕರ್ತವ್ಯಕ್ಕೆ ಗೈರಾಗಿ ರಾಜ್ಯವ್ಯಾಪಿ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ ನೌಕರರು

Suddi Sante Desk
ಮಾರ್ಚ್ 1 ರ ಸರ್ಕಾರಿ ನೌಕರರ ಹೋರಾಟಕ್ಕೆ ರಾಜ್ಯದಲ್ಲಿ ಜೋರಾಗುತ್ತಿದೆ ಕೂಗು – ಕರ್ತವ್ಯಕ್ಕೆ ಗೈರಾಗಿ ರಾಜ್ಯವ್ಯಾಪಿ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ ನೌಕರರು

ಚಾಮರಾಜನಗರ

7ನೇ ವೇತನ ಆಯೋಗ ಜಾರಿಗೆ ಹಾಗೇ  ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘಟನೆ ಕರೆ ನೀಡಿರುವ  ಮಾರ್ಚ್‌ 1 ರ ಹೋರಾಟಕ್ಕೆ ರಾಜ್ಯವ್ಯಾಪಿ ಅಭೂತಪೂರ್ವ ಬೆಂಬಲ ಕಂಡು ಬರುತ್ತಿದೆ.ಹೌದು ಹೋರಾಟಕ್ಕೆ ಕರೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಈ ಒಂದು ಹೋರಾಟಕ್ಕೆ ರಾಜ್ಯವ್ಯಾಪಿ ನೌಕರರು ಸಿದ್ದರಾಗುತ್ತಿದ್ದು ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂಬ ಸಂದೇಶವನ್ನು ರಾಜ್ಯದ ಮೂಲೆ ಮೂಲೆಗಳಿಂದ ನೌಕರರು ನೀಡುತ್ತಿದ್ದಾರೆ.

ಇನ್ನೂ ಈ ಒಂದು ಹೋರಾಟಕ್ಕೆ ಚಾಮರಾಜ ನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದವರು ಬೆಂಬಲವನ್ನು ಸೂಚಿಸಿದ್ದು ಜಿಲ್ಲಾಧ್ಯಕ್ಷ ಚಂದ್ರ ಶೇಖರ್ ಈ ಕುರಿತಂತೆ ಮಾಹಿತಿಯನ್ನು ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2023-24ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡ ದಿರುವುದು ಬೇಸರ ಮೂಡಿಸಿದೆ

ಹೀಗಾಗಿ ರಾಜ್ಯ ಸಂಘಟನೆ ಕರೆ ನೀಡಿರುವ ಹೋರಾಟಕ್ಕೆ ಬೆಂಬಲವನ್ನು ನೀಡೊದಾಗಿ ಹೇಳಿದರು.ಮುಷ್ಕರ ಸಂದರ್ಭದಲ್ಲಿ ನೌಕರರೆ ಲ್ಲರೂ ಮನೆಯಲ್ಲೇ ಇದ್ದುಕೊಂಡು ಡಿಪಿ ಹಾಗೂ ಸ್ಟೇಟಸ್‌ನಲ್ಲಿ ಬಿತ್ತಿಪತ್ರಗಳನ್ನು ಹಾಕುವ ಮೂಲಕ ಪ್ರತಿಭಟನೆ ಮಾಡುತ್ತೇವೆ.6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಗೂ ಮೊದಲು ಫಿಟ್‌ಮೆಂಟ್ ಸೌಲಭ್ಯ ಜಾರಿ ಗೊಳಿಸಬೇಕು.

ಇನ್ನೂ ಪಂಜಾಬ್,ಸೇರಿದಂತೆ ಹಲವು ರಾಜ್ಯಗ ಳಲ್ಲಿನ ಮಾದರಿಯಲ್ಲಿ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಜಾರಿಗೊಳಿಸ ಬೇಕು ಈ ಮೂಲಕ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಶಿವಮೂರ್ತಿ,ಯೋಗೇಶ್,ಖಜಾಂಚಿ ಮಹದೇವಯ್ಯ, ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಕುಂಟೋಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಚಾಮರಾಜನಗರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.