ವಿನಯ ಕುಲಕರ್ಣಿಗೆ ಮತ್ತೆ ಶಾಕ್ ನೀಡಿದ ನ್ಯಾಯಾಲಯ – ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಮುಂದೇನು…..

Suddi Sante Desk
ವಿನಯ ಕುಲಕರ್ಣಿಗೆ ಮತ್ತೆ ಶಾಕ್ ನೀಡಿದ ನ್ಯಾಯಾಲಯ – ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಮುಂದೇನು…..

ಬೆಂಗಳೂರು

ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಅವರಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ ಹೌದು ಷರತ್ತು ಸಡಿಲಿಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೋಳಿಸಿದೆ ಶಾಸಕ ವಿನಯ್ ಕುಲಕುರ್ಣಿ ಅವರ ಅರ್ಜಿಯನ್ನು ಹೈಕೋರ್ಟ್​ ಏಕ ಸದಸ್ಯ ಪಿಠವು ವಜಾಗೊ ಳಿಸಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣ ದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಈ ಹಿಂದೆ ಚುನಾವಣೆಗೆ ಸ್ಪರ್ಧಿಸಿದಾಗ ಹಾಗೂ ಸುಪ್ರೀಂ ಕೋರ್ಟ್​ಗೆ ಮೇಲ್ಮನವ ಸಲ್ಲಿಸಿದಾ ಗಲೂ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿರ ಲಿಲ್ಲ.ಪ್ರಸ್ತುತ ಶಾಸಕನಾಗಿದ್ದು ಈಗಲಾದರೂ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.

ನ್ಯಾಯಮೂರ್ತಿ. ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಿದೆ.ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು.ಶಾಸಕ ವಿನಯ್ ಕುಲಕರ್ಣಿ ಮೇಲೆ ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪವಿದೆ.ಪ್ರಮುಖ ಸಾಕ್ಷಿ ಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ ಎಂದು ಈ ಒಂದು ಅರ್ಜಿಯನ್ನು ವಜಾಗೋಳಿಸಿ ಶಾಸಕ ವಿನಯ ಕುಲಕರ್ಣಿ ಅವರಿಗೆ ಶಾಕ್ ನೀಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.