ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ ನೀಡಿದ ನ್ಯಾಯಾಲಯ – ಲಂಚದ ರೂಪದಲ್ಲಿ ಮೊಬೈಲ್ ಬೇಡಿಕೆ ಇಟ್ಟಿದ್ದ ಅಧಿಕಾರಿಗೆ ಜೈಲು ಶಿಕ್ಷೆ…..

Suddi Sante Desk
ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ ನೀಡಿದ ನ್ಯಾಯಾಲಯ – ಲಂಚದ ರೂಪದಲ್ಲಿ ಮೊಬೈಲ್ ಬೇಡಿಕೆ ಇಟ್ಟಿದ್ದ ಅಧಿಕಾರಿಗೆ ಜೈಲು ಶಿಕ್ಷೆ…..

ಕಾರವಾರ

ಲಂಚವಾಗಿ ಮೊಬೈಲ್’ಗೆ ಬೇಡಿಕೆಯಿಟ್ಟ ಅಧಿಕಾರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಘಟನೆ ಕಾರವಾರ ದಲ್ಲಿ ನಡೆದಿದೆ.ಶಿರಸಿ ಉಪವಿಭಾಗದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಕೆ. ಸಿ. ಮೋಹನರವರಿಗೆ ಮೊಬೈಲ್ ಫೋನ್ ಲಂಚ ಕೇಳಿದಕ್ಕಾಗಿ ಒಂದು ವರ್ಷದ ಜೈಲು ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಲಾಗಿದೆ.

ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀ ಶರು ಆಪಾದಿತನ ವಿರುದ್ಧ ಭ್ರಷ್ಟ್ಟಾಚಾರ ಪ್ರತಿಬಂ ಧಕ ಕಾಯ್ದೆ-1988 ಕಲಂ:07, 13(1) (ಡಿ) ಸಹಿತ 13 (2) ನೇದ್ದರಂತೆ ದಂಡ ಹಾಗೂ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಕಲಂ 07 ರ ಅಡಿಯಲ್ಲಿ 1 ವರ್ಷ ಸಾದಾ ಕಾರಾವಾಸ ಹಾಗೂ ರೂ. 5000 ದಂಡ ವಿಧಿಸಿದ್ದು ಹಾಗೂ ಕಲಂ:13(1) (ಡಿ) ಸಹಿತ 13(2) ರ ಅಡಿಯಲ್ಲಿ 1 ವರ್ಷ ಸಾದಾ ಕಾರಾವಾಸ ಹಾಗೂ ರೂ. 5000 ದಂಡ ವಿಧಿಸ ಲಾಗಿದೆ.

ದಂಡ ಪಾವತಿಸದೇ ಇದ್ದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಕಾರಾವಾಸ ಶಿಕ್ಷೆಗೆ ಗುರಿಪಡಿಸಲು ಆದೇಶಿ ಸಿರುತ್ತಾರೆ.ಕಾನೂನು ಮಾಪನ ಶಾಸ್ತ್ರ ಇಲಾಖೆ ಯ ನಿರೀಕ್ಷಕ ಕೆ. ಸಿ. ಮೋಹನ ಮೊಬೈಲ್ ಅಂಗಡಿ ಯೊಂದರ ಮಾಲಕನಿಂದ ಮೊಬೈಲ್ ಫೋನ್ ಲಂಚ ಕೇಳಿ ಸಿಕ್ಕಿಬಿದ್ದಿದ್ದರು. ಅಂಗಡಿಯಲ್ಲಿರುವ ಮೊಬೈಲ್ ಸೆಟ್‌ಗಳನ್ನು, ಅದರ ಬಿಲ್ಲನ್ನು ಹಾಜರ ಪಡಿಸದ ಹಾಗೂ ಉತ್ಪಾದಕರ ಹೆಸರು ವಿಳಾಸ ಹಾಗೂ ದಿನಾಂಕಗಳನ್ನು ನಮೂದಿಸದ ಕಾರಣ ಆ ಮೊಬೈಲ್ ಫೋನ್‌ಗಳ ಗಳನ್ನು ಜಪ್ತಿ ಮಾಡ ಲಾಗಿತ್ತು.

ನಾಗರಾಜ 20-25 ಸಾವಿರ ದಂಡವನ್ನು ಭರಿಸಲು ಅಂಗಡಿದಾರರಿಗೆ ಹೇಳಿದ್ದರು.ನಂತರ ದಂಡದ ಹಣವನ್ನು ಕಡಿಮೆ ಮಾಡಲು ಲಂಚದ ರೂಪದಲ್ಲಿ ಒಂದು ಸ್ಯಾಮ್ ಸಂಗ್ ಮೊಬೈಲ್ ಸೆಟ್ಟಿಗೆ ಬೇಡಿಕೆ ಇಟ್ಟು ದಂಡವನ್ನು 3000 ರೂ.ಗೆ ಇಳಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಕಾರವಾರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.