ಮುಖ್ಯಶಿಕ್ಷಕ ಸೇರಿ ಇಬ್ಬರು ಶಿಕ್ಷಕರು ಅಮಾನತು – ಅಮಾನತು ಮಾಡಿ‌ ಆದೇಶ ಮಾಡಿದ DDPI…..

Suddi Sante Desk
ಮುಖ್ಯಶಿಕ್ಷಕ ಸೇರಿ ಇಬ್ಬರು ಶಿಕ್ಷಕರು ಅಮಾನತು – ಅಮಾನತು ಮಾಡಿ‌ ಆದೇಶ ಮಾಡಿದ DDPI…..

ತುಮಕೂರು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಖ್ಯಶಿಕ್ಷಕ ರೊಬ್ಬರನ್ನು ಅಮಾನತು ಮಾಡಿರುವ ಘಟನೆ ತುಮಕೂರಿ ನಲ್ಲಿ ನಡೆದಿದೆ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋ ಪಾಧ್ಯಾಯರನ್ನು ಅಮಾನತುಗೊಳಿಸಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋ ಪಾಧ್ಯಾಯರನ್ನು ಅಮಾನತುಗೊಳಿಸಿದೆ. ಬೋರ ಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ,ವಿದ್ಯಾರ್ಥಿನಿಯರೊಂದಿಗೆ ಪ್ರತಿದಿನ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರಂತೆ

ಇದೇ ವೇಳೆ ಕರ್ತವ್ಯಲೋಪ ಆರೋಪದಡಿ ಮುಖ್ಯಶಿಕ್ಷಕ ನಟರಾಜ್ ಅವರನ್ನು ಅಮಾನತು ಗೊಳಿಸಲಾಗಿದೆ.ಅಪರಾಧದ ಬಗ್ಗೆ ಮಾಹಿತಿ ಪಡೆದ ಸಂತ್ರಸ್ತರ ಪೋಷಕರು ಇತರ ಸ್ಥಳೀಯ ನಿವಾಸಿಗಳೊಂದಿಗೆ ಶಾಲೆಯ ಆವರಣಕ್ಕೆ ನುಗ್ಗಿ ಆರೋಪಿ ಶಿಕ್ಷಕನ ಕೃತ್ಯದ ಬಗ್ಗೆ ಪ್ರಶ್ನಿಸಿದರು.

ಅಲ್ಲದೆ ಗುಂಪು ಮಂಜುನಾಥನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿತ್ತು ಘಟನೆ ನಂತರ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ತಿಮ್ಮರಾಜು, ಬಡವನ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾ ಯಪ್ಪ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅನಿತಾ ಅವರನ್ನೊಳಗೊಂಡ ತಂಡ ಆರೋಪಿ ಶಿಕ್ಷಕನಿಂದ ಲೈಂಗಿಕ ಕಿರುಕುಳದ ಕುರಿತು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿತು. ಸದ್ಯ ಮಂಜುನಾಥ ಬಡವನಹಳ್ಳಿ ಪೊಲೀಸರ ವಶದಲ್ಲಿದ್ದಾರೆ.

ಸುದ್ದಿ ಸಂತೆ ನ್ಯೂಸ್ ತುಮಕೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.