ಶಿವಮೊಗ್ಗ –
ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಾಧ್ಯಾಪ ಕರೊಬ್ಬರು ಶವವಾಗಿ ಪತ್ತೆಯಾದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.ಹೌದು ಇಲ್ಲಿನ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ತಳಿ ಅಭಿವೃದ್ಧಿ ಮತ್ತು ಅನುವಂಶೀಯತೆ ವಿಭಾಗದ ಮುಖ್ಯಸ್ಥ ಪ್ರೊ.ಗಂಗಾಪ್ರಸಾದ್ (59) ಅವರ ಮೃತದೇಹ ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಕೆರೆ ಸಮೀಪ ಪತ್ತೆಯಾಗಿದೆ.
ಮೂಲತಹ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದೊಗ್ಗನಾಳು ಗ್ರಾಮದ ಗಂಗಾಪ್ರಸಾದ್ ಶಿವಮೊಗ್ಗದ ಬಸವೇಶ್ವರ ನಗರದಲ್ಲಿ ನೆಲೆಸಿದ್ದರು.
ಎರಡು ದಿನಗಳ ಹಿಂದೆ ಮನೆಯಿಂದ ಹೋದವರು ಮತ್ತೆ ಮರಳಿರಲಿಲ್ಲ.ಕಾರು ಸಾಸ್ವೆಹಳ್ಳಿಯಲ್ಲಿ ಪತ್ತೆಯಾದರೆ ಇತ್ತ ಇವರ ಮೃತದೇಹ ಕೆರೆಯಲ್ಲಿ ಸಿಕ್ಕಿದ್ದು ಹಲವು ಅನುಮಾನ ಗಳನ್ನು ಹುಟ್ಟುಹಾಕಿದೆ
ಅವರ ಸಾವು ಅನುಮಾಸ್ಪದವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ ಸಧ್ಯ ಈ ಕುರಿತು ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ