ಮುಖ್ಯಶಿಕ್ಷಕಿ ಸ್ನೇಹಲತಾ ಅಮಾನತು ವಿದ್ಯಾರ್ಥಿನಿಗೆ ಶಿಕ್ಷೆ ನೀಡಿದ್ದ ಮುಖ್ಯ ಶಿಕ್ಷಕಿಗೆ ಶಿಕ್ಷೆ ನೀಡಿದ ಇಲಾಖೆ…..

Suddi Sante Desk

ಮಂಡ್ಯ –

ಶಾಲೆಗೆ ಮೊಬೈಲ್ ತಗೆದುಕೊಂಡು ಬಂದಿದ್ದಾಳೆ ಎಂಬ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬಳನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮುಖ್ಯ ಶಿಕ್ಷಕಿಯನ್ನು ಇಲಾಖೆ ಅಮಾನತು ಮಾಡಿದೆ.ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮುಖ್ಯ ಶಿಕ್ಷಕಿ ಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ.

ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ವಿವಸ್ತ್ರ ಗೊಳಿಸಿದ ಮುಖ್ಯ ಶಿಕ್ಷಕಿ ಸ್ನೇಹಲತಾ ಬಟ್ಟೆ ಬಿಚ್ಚಿಸಿ ಫ್ಯಾನ್ ಕೆಳಗೆ ಕೂರಿಸಿದ್ದರು ಇವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಗ್ರಾಮಸ್ಥರು ಕೂಡ ಮುಖ್ಯಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಉನ್ನತ ಅಧಿಕಾರಿಗಳಿಗೆ ವರದಿ ನೀಡಿದ್ದರು.

ವರದಿ ಆಧಾರದ ಮೇಲೆ ಶಿಕ್ಷಕಿಯನ್ನು ಅಮಾನತು ಮಾಡ ಲಾಗಿದೆ.ಡಿಸೆಂಬರ್ 22ರಂದು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೊಬೈಲ್ ತಂದಿದ್ದ ಕಾರಣಕ್ಕೆ ಎಂಟನೇ ತರಗತಿ ವಿದ್ಯಾರ್ಥಿ ನಿಯ ಬಟ್ಟೆ ಬಿಚ್ಚಿಸಿದ್ದ ಮುಖ್ಯ ಶಿಕ್ಷಕಿ ಮೊಬೈಲ್ ತಂದವರು ಕೊಡಬೇಕು.

ಇಲ್ಲದಿದ್ದರೆ ವಿದ್ಯಾರ್ಥಿಗಳಿಂದ ನಿಮ್ಮನ್ನು ಚೆಕ್ ಮಾಡಿಸು ತ್ತೇನೆ ಎಂದು ಬೆದರಿಕೆ ಹಾಕಿದ್ದು,ಕೆಲವು ವಿದ್ಯಾ ರ್ಥಿನಿಯರ ಸ್ವೆಟರ್ ಬಿಚ್ಚಿಸಿದ್ದಾರೆ.

ವಿದ್ಯಾರ್ಥಿನಿಯ ಸ್ಕರ್ಟ್ ಹರಿದುಹಾಕಿದ್ದಾರೆ. ಓರ್ವ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿ ಹಲ್ಲೆ ಮಾಡಿ ಚಳಿ ಆಗಲೆಂದು ಜೋರಾಗಿ ಫ್ಯಾನ್ ಹಾಕಿ ಕೆಳಗೆ ಸಂಜೆವರೆಗೂ ಊಟ ನೀರು ಕೊಡದೇ ಹಾಗೆಯೇ ಕೂರಿಸಿದ್ದಾರೆ.

ಸಂಜೆ ಮನೆಗೆ ಮರಳಿದ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದು ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾ ಗಿತ್ತು.ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.