ಅಕ್ಟೋಬರ್ 3 ರಿಂದ ರಾಜ್ಯಾದ್ಯಂತ ದಸರಾ ರಜೆ ದಕ್ಷಿಣ ಕನ್ನಡ ಜಿಲ್ಲೆ ರಜೆ ಅವಧಿಯಲ್ಲಿ ಬದಲಾವಣೆ ಮಾಡಿದ ಶಿಕ್ಷಣ ಸಚಿವರು…..

Suddi Sante Desk

ಬೆಂಗಳೂರು –

ಉಡುಪಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಈಗಾ ಗಲೇ ನಿಗದಿಪಡಿಸಿದಂತೆ ಅಕ್ಟೋಬರ್ 3ರಿಂದ 16ರವರೆಗೆ ದಸರಾ ರಜೆ ಇರಲಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆಯ ಅವಧಿಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿದರು ರಾಜ್ಯಕ್ಕೆ ಬೇರೆ ರಜಾ ಅವಧಿ ಇದೆ ಎಂದರು

ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಹಬ್ಬಕ್ಕೆ ಪ್ರತ್ಯೇಕ ವಾಗಿ ಶಾಲೆಗಳಿಗೆ ರಜೆ ನೀಡಲು ಸ್ಥಳೀಯ ಜನ ಪ್ರತಿನಿಧಿ ಗಳು ಬೇಡಿಕೆ ಇಟ್ಟು ಒತ್ತಾಯವನ್ನು ಮಾಡಿದ್ದು ಹೀಗಾಗಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಸೂಚನೆ ನೀಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಮಂಗಳೂರು ದಸರಾ ಆಚರಿಸಲು ಅನುಕೂಲವಾಗುವಂತೆ ಅಕ್ಟೋಬರ್‌ 2ರ ಗಾಂಧಿ ಜಯಂತಿ ಆಚರಣೆಯ ಷರತ್ತು ವಿಧಿಸಿ ರಜೆ ಬದಲಾವಣೆಗೆ ಸಮ್ಮತಿಸಲಾಗಿದೆ ಎಂದು ಸಚಿವರು ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.