ರಾಜ್ಯದ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು ಇನ್ನೂ ಮುಂದೆ ಸರ್ಕಾರಿ ಶಾಲೆ ಗಳಲ್ಲೂ ಸಿಗಲಿದೆ ಈ ಸೌಲಭ್ಯ…..

Suddi Sante Desk

ಬೆಂಗಳೂರು –

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ಸರ್ಕಾರಿ ಮಾದರಿ ಶಾಲೆ ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ಸ್ಪೋಕನ್ ಇಂಗ್ಲೀಷ್ ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ಶಾಲೆ ಉಳಿಸಿ ಕನ್ನಡ ಬೆಳೆಸಿ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಹೋಬಳಿ,ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದೊಂದು ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ಸಾಲಿನ ಬಜೆಟ್‌ನಲ್ಲಿ ಈ ಅಂಶವನ್ನು ಘೋಷಣೆ ಮಾಡಲಾಗಿದೆ ಎಂದರು.ಇನ್ನೂ ಶಾಲೆಯ ಎಲ್ಲಾ ತರಗತಿ ಗಳಿಗೆ ಅಗತ್ಯ ಕೊಠಡಿಗಳು ಮತ್ತು ಎಲ್ಲಾ ಭಾಷೆ ಮತ್ತು ವಿಷಯಕ್ಕೆ ತಲಾ ಒಬ್ಬರು ಶಿಕ್ಷಕರು ಲಭ್ಯವಿರುವಂತಹ ವ್ಯವಸ್ಥೆ ಮಾಡಲಾಗುತ್ತದೆ.ಇಂತಹ ಶಾಲೆಗಳಲ್ಲಿ ಕನ್ನಡ ಕಲಿಕೆ ಜೊತೆಗೆ ಇಂಗ್ಲೀಷ್ ಕಲಿಕೆ ಹಾಗೂ ಶಿಕ್ಷಕರಿಂದ ಸ್ಪೋಕನ್ ಇಂಗ್ಲೀಷ್ ಕಲಿಸಿಕೊಡಲಾಗುತ್ತದೆ.ಇದೇ ಸಲಹೆ ಯನ್ನು ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರೂ ನೀಡಿದ್ದು ಅದನ್ನು ಸ್ವೀಕರಿಸಲಾಗುತ್ತದೆ ಎಂದರು

ಇನ್ನೂ ಖಾಸಗಿ ಶಾಲೆಗಳು ಮತ್ತು ಇಂಗ್ಲೀಷ್ ಮಾಧ್ಯಮ ಶಿಕ್ಷಣದ ವ್ಯಾಮೋಹ ಬಹಳಷ್ಟು ಜನರಲ್ಲಿದೆ.ಗುಣಮಟ್ಟ ಹೇಗಾದರೂ ಇರಲಿ ಮಕ್ಕಳಿಗೆ ಇಂಗ್ಲೀಷ್ ಕಲಿಸಬೇಕು ಎನ್ನುವ ಆಸೆ ಪಾಲಕರಲ್ಲಿ ಇದೆ.ರಾಜ್ಯದಲ್ಲಿನ ಕೆಪಿಎಸ್ ಶಾಲೆಗಳಲ್ಲೂ ಕೂಡ ಇಂಗ್ಲೀಷ್ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಲು ಪಾಲಕರು ಆಸಕ್ತಿ ತೋರಿಸುತ್ತಿದ್ದಾರೆ.ಹೀಗಾಗಿ, ಮಾದರಿ ಶಾಲೆಗಳಲ್ಲಿ ಇಂಗ್ಲೀಷ್‌ನ್ನು ಸ್ಪೋಕನ್ ಇಂಗ್ಲೀಷ್ ಆಗಿ ಕಲಿಸುವ ಉದ್ದೇಶವಿದೆ ಎಂದು ಸಚಿವರು ಹೇಳಿದರು.

ಪ್ರಾಥಮಿಕ ಶಾಲಾ ಹಂತದಿಂದಲೇ ಗಣಿತ ಮತ್ತು ಪರಿಸರ ಅಧ್ಯಯನ ವಿಷಯಗಳ ಪಠ್ಯ ಪುಸ್ತಕಗಳನ್ನು ದ್ವಿಭಾಷೆ ಯಲ್ಲಿ ಮುದ್ರಿಸಲಾಗುತ್ತಿದೆ.ಹಾಳೆಯ ಒಂದು ಬದಿ ಕನ್ನಡ ಇದ್ದರೆ ಮತ್ತೊಂದು ಬದಿ ಇಂಗ್ಲೀಷ್‌ನಲ್ಲಿ ಮುದ್ರಿಸಲಾಗು ತ್ತಿದೆ.1ರಿಂದ 4ನೇ ತರಗತಿವರೆಗೆ ಈ ಎರಡು ವಿಷಯಗ ಳನ್ನು ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತದೆ.2019-20 ರಿಂದ 2021-22ರವರೆಗೆ ಪ್ರತಿ ವರ್ಷ ಒಂದೊಂದು ತರಗತಿ ಯಂತೆ 1ರಿಂದ 3ನೇ ತರಗತಿವರೆಗೆ ದ್ವಿಭಾಷೆಯಲ್ಲಿ ಮುದ್ರಿಸಲಾಗುತ್ತಿತ್ತು.ಈ ಶೈಕ್ಷಣಿಕ ವರ್ಷದಿಂದ 1ರಿಂದ 4ನೇ ತರಗತಿವರೆಗೆ ಮುದ್ರಿಸಲಾಗುತ್ತಿದೆ.

ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಸ್ಪರ್ಧಾತ್ಮಕ ಲೋಕ ದಲ್ಲಿ ಸ್ಪರ್ಧಿಸಲಾಗದು.ಇಂಗ್ಲೀಷ್‌ನಲ್ಲೇ ಓದಬೇಕು ಎಂಬ ಮಾನಸಿಕತೆ ಜನರಲ್ಲಿ ಬಂದಿದೆ.ಇತ್ತೀಚಿನ ವರ್ಷಗಳಲ್ಲಿ ಕನ್ನಡ ಶಾಲೆಗಳು ಮುಚ್ಚಿರುವುದು ಕೂಡ ಅದಕ್ಕೆ ಸಾಕ್ಷಿ ಯಾಗಿದೆ.47 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಪೈಕಿ 3,800 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ.ಒಬ್ಬ ವಿದ್ಯಾರ್ಥಿ ಇರುವ 562 ಶಾಲೆಗಳನ್ನು ರಾಜ್ಯ ಸರ್ಕಾರ ನಡೆಸುತ್ತಿದೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು.

ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌.ಎಲ್. ಭೈರಪ್ಪ,ಕಸಾಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ,ನಿಡುಮಾಮಿಡಿ ಮಹಾಸಂಸ್ಥಾನದ,ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ,ಶಿಕ್ಷಣ ಇಲಾಖೆ ಅಧಿಕಾರಿ ಗಳು, ಶಿಕ್ಷಣ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.