ವಿಶೇಷ ತರಗತಿ ಮಾಡಿ ಪಠ್ಯಕ್ರಮ ಪೂರ್ಣಗೊಳಿಸಲು ಶಿಕ್ಷಕರಿಗೆ ಸೂಚನೆ – ಪಠ್ಯಕ್ರಮ ಕಡಿತವಿಲ್ಲ ವೆಂದ ಶಿಕ್ಷಣ ಸಚಿವರು…..

Suddi Sante Desk

ಬೆಂಗಳೂರು –

ಈ ವರ್ಷ ಯಾವುದೇ ರೀತಿಯಲ್ಲೂ ಪಠ್ಯ ಕ್ರಮವನ್ನು ಕಡಿತಗೊಳಿಸುವ ಯಾವುದೇ ನಿರ್ಧಾರಗಳಿಲ್ಲ.ಒಂದು ವೇಳೆ ಪಠ್ಯಕ್ರಮ ಕಡಿತಗೊಳಿಸಿದರೆ ಮುಂದಿನ ವರ್ಷದ ಶಿಕ್ಷಣದ ಮೇಲೆ ತೀವ್ರವಾದ ಪರಿಣಾಮ ಬೀರುವ ಕಾರಣ ಈ ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು‌.ಬೆಂಗಳೂರಿನಲ್ಲಿ ಮಾತನಾಡಿದ ಅವರು ಉಪನ್ಯಾಸಕರು ಮತ್ತು ಶಿಕ್ಷಕರು ಈ ಬಾರಿ ವಿಶೇಷ ತರಗತಿಗಳನ್ನು ಮಾಡುವ ಮೂಲಕ ಪಠ್ಯವಸ್ತುಗಳನ್ನು ನಿಗದಿತ ಸಮಯದೊಳಗೆ ಮುಗಿಸುವಲ್ಲಿ ಶ್ರಮ ವಹಿಸಲಿ ದ್ದಾರೆ ಎಂದರು

ಇನ್ನೂ ಪ್ರಮುಖವಾಗಿ ಬಿಸಿಯೂಟ ಸೇರಿದಂತೆ ಮಕ್ಕಳಿಗೆ ದೊರಕಬೇಕಾದ ಸೌಲಭ್ಯಗಳನ್ನು ಆರಂಭಿಸಲಾಗಿದೆ. ಮುಂದೆ ಶಾಲೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸ ಲಾಗುವುದು. ಮಕ್ಕಳಿಗೆ ಕೋವಿಡ್‌-19 ವ್ಯಾಕ್ಸಿನ್‌ ನೀಡಲು ಪರೀಕ್ಷೆಗಳು ನಡೆಯುತ್ತಿವೆ.ವ್ಯವಸ್ಥಿತ ಪರೀಕ್ಷೆಗಳ ನಂತರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್‌ ಅನ್ನು ನೀಡಲಾಗುವುದು ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.