ಕೊಡಗು –
ರಾಜ್ಯದ ಪ್ರತಿ ಸರ್ಕಾರಿ ಶಾಲೆಗಳಿಗೆ ಮುಂದಿನ 15 ದಿನದ ಒಳಗೆ ಸಮವಸ್ತ್ರ ಮತ್ತು ಶೂಗಳ ವಿತರಣೆ ಕಾರ್ಯ ನಡೆ ಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ಜಿಲ್ಲೆಯ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾದ ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಮುಂದಿನ 15 ದಿನದ ಒಳಗೆ ರಾಜ್ಯದ ಪ್ರತಿ ಸರ್ಕಾರಿ ಶಾಲೆ ಗಳಿಗೆ ಸಮವಸ್ತ್ರ ಮತ್ತು ಶೂಗಳ ವಿತರಣೆ ಕಾರ್ಯ ನಡೆ ಯಲಿದ್ದು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂ ಡಿದೆ ಎಂದರು.
ಇನ್ನೂ ಕಾಡಿನಲ್ಲಿ ವಾಸಿಸುವ ಮಕ್ಕಳು ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಓದಿನಲ್ಲಿ ಹಿಂದುಳಿ ಯುತ್ತಾರೆ.ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಬುಡಕಟ್ಟು ಸಮುದಾಯದ ಮಕ್ಕಳ ಓದಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದರು.